25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

ಬೆಳ್ತಂಗಡಿ: ವೇಣೂರು ಗ್ರಾಮದ ಗುಂಡೂರಿನ ನಿವಾಸಿ ಅನುಷಾ ಎಂಬುವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಸಂದರ್ಭ ವೇಣೂರು ಸರ್ಕಾರಿ ಆಸ್ಪತ್ರೆ ಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಸರಕಾರಿ ಲೇಡಿಗೋಸಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭ 108 ಆಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.

ಅನುಷಾರವರಿಗೆ ಮೂತ್ರ ಸೊಂಕಿನ ಸಮಸ್ಯೆ ಇದೆ ಎಂದು ಸಮುದಾಯ ಆರೋಗ್ಯ ಕೇಂದ್ರ ವೇಣೂರು ಇಲ್ಲಿಂದ ಮಂಗಳೂರು ಸರಕಾರಿ ಲೇಡಿಗೋಸಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗ್ಬೇಕು ಎಂದು ಎಮರ್ಜೆನ್ಸಿ ಕರೆ ಬಂದಿದ್ದ ಸಂದರ್ಭ ತಕ್ಷಣ ಕಾರ್ಯ ಪ್ರವೃತ್ತ ರಾದ ಬೆಳ್ತಂಗಡಿ 108 ಆಂಬುಲೆನ್ಸ್ ಸಿಬ್ಬಂದಿಗಳು ವೇಣೂರು ಆಸ್ಪತ್ರೆಯಿಂದ ರೋಗಿಯನ್ನು ಕರೆದುಕೊಂಡು ಹೋಗುವಷ್ಟರಲ್ಲಿ ರೋಗಿಯ ಚಲನ ವಲನ ಗಮನಿಸಿದ ತುರ್ತು ವೈದ್ಯಕೀಯ ತಜ್ಞ ಕೇಶವ. ಕೆ. ಅವರು ಆಂಬುಲೆನ್ಸ್ ಮಂಗಳೂರಿನ ಪಡೀಲ್ ತಲುಪುತಿದ್ದಂತೆ ಆಂಬುಲೆನ್ಸ್ ನಲ್ಲಿಯೇ ಬಹಳ ಕ್ಲಿಷ್ಟಕರವಾದ ಹೆರಿಗೆಯನ್ನು ಮಾಡಿ ಮಗುವನ್ನು ಮತ್ತು ತಾಯಿಯನ್ನು ಮಂಗಳೂರಿನ ಸರಕಾರಿ ಲೇಡಿಗೊಶನ್ ಆಸ್ಪತ್ರೆಗೆ ಬಹಳ ಸುರಕ್ಷಿತವಾಗಿ ದಾಖಲಿಸಿದರು.

ಕೇಶವ ಕೆ ಇವರು ಮಾಡಿದ ಸುರಕ್ಷಿತ 60ನೇ ಆಂಬುಲೆನ್ಸ್ ಹೆರಿಗೆಯಾಗಿರುತ್ತದೆ. ಬೆಳ್ತಂಗಡಿಗೆ ಹೊಸದಾಗಿ ಆಯ್ಕೆಗೊಂಡಿರುವ ಎಮರ್ಜೆನ್ಸಿ (ಪೈಲೆಟ್) ಚಾಲಕ ಮಂಜುನಾಥ್ ಎಚ್. ಕೆ. ಅವರು ಸಹಕರಿಸಿದರು.

Related posts

ಅರಸಿನಮಕ್ಕಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನದ ಕುರಿತು ಮಾಹಿತಿ ಕಾರ್ಯಕ್ರಮ:

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೆಯರ್ ವಿತರಣೆ

Suddi Udaya

ಪಡಂಗಡಿ ಗ್ರಾಮ‌ ಪಂಚಾಯತ್ ನಲ್ಲಿ ವಿಕಾಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಡಿ.26-27: ಬಳಂಜ ಬದಿನಡೆ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಸಾಮಾನ್ಯ ಸಭೆ

Suddi Udaya
error: Content is protected !!