25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ: ಶಾಸಕ ಹರೀಶ್ ಪೂಂಜ: ಮಾಜಿ ಶಾಸಕ ವಸಂತ ಬಂಗೇರ ನಡೆ ವಿರುದ್ಧ ಹಾಲಿ ಶಾಸಕರ ಕ್ರಮ ಎಚ್ಚರಿಕೆ: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳ ಹಕ್ಕುಗಳಿಗೆ ಚ್ಯುತಿಯಾದ ಸಂದರ್ಭ ಹಕ್ಕುಚ್ಯುತಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ

ಬೆಳ್ತಂಗಡಿ: ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆ ಸೇವೆ ಬಗ್ಗೆ ಕಳೆದ ನಾಲೈದು ವರ್ಷಗಳಿಂದ ಯಾವೊಬ್ಬ ರೋಗಿಯೂ ದೂರಿದ್ದನ್ನು ನಾನು ನೋಡಿಲ್ಲ. ಆಸ್ಪತ್ರೆ ಸುಸಜ್ಜಿತವಾಗಿದೆ. ಆದರೂ ಮಾಜಿ ಶಾಸಕರು ಅವ್ಯವಸ್ಥೆ ಇದೆ ಎಂದು ಆರೋಪಿಸುತ್ತಾರೆ. ಅಲ್ಲಿರುವುದು ಸಿಬ್ಬಂದಿ ಹಾಗೂ ರೋಗಿಗಳ ಮಧ್ಯೆ ಇರುವ ಗೊಂದಲವೇ ಹೊರತು ಬೇರೆ ಯಾವುದೇ ಸಮಸ್ಯೆಗಳಿಲ್ಲ. ಆಸ್ಪತ್ರೆಯಲ್ಲಿ ಮಾಜಿ ಶಾಸಕರ ಅಧಿಕಾರಾವಧಿಯಲ್ಲಿ 2 ಡಯಾಲಿಸಿಸ್ ಮಷಿನ್ ಇತ್ತು. ಸಾರ್ವಜನಿಕರ ಅಗತ್ಯ ಮನಗಂಡು ನನ್ನ ಅವಧಿಯಲ್ಲಿ ಹೆಚ್ಚುವರಿ 6 ಡಯಾಲಿಸಿಸ್ ಮೆಷಿನ್ ಅಳವಡಿಸಿದ್ದರಿಂದ ಈಗ ಒಟ್ಟು 8 ಡಯಾಲಿಸಿಸ್ ಮಷಿನ್ ಇದೆ. ಸರಾಸರಿ 80 ಕಿಡ್ನಿರೋಗಿಗಳಿಗೆ ಅನುಕೂಲವಾಗುತ್ತಿದೆ. ಸಿದ್ದರಾಮಯ್ಯನವರು ಹಿಂದಿನ ಬಾರಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಜ್ಯದೆಲ್ಲೆಡೆ ಡಯಾಲಿಸಿಸ್ ನಿರ್ವಹಿಸಲು ಹೊರರಾಜ್ಯದ ಸಂಜೀವಿನಿ’ ಏಜೆನ್ಸಿಗೆ 10 ವರ್ಷಗಳ ಅವಧಿಗೆ ಗುತ್ತಿಗೆ ನೀಡಲಾಗಿದ್ದು, ಅದರ ಸಮಸ್ಯೆಗಳನ್ನು ಪರಿಹರಿಸುವುದು ನಮ್ಮ ಕೈಯಲ್ಲಿಲ್ಲ. ಸರ್ಕಾರವೇ ಪರಿಹರಿಸಬೇಕು ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಜನರಿಂದ ಆಯ್ಕೆಯಾದ ಶಾಸಕರಿರುವಾಗ ಇನ್ಯಾರೋ ಬಂದು ಅಧಿಕಾರಿಗಳನ್ನು ನಿಂದಿಸುವುದು, ನಿರ್ದೇಶನಗಳನ್ನು ನೀಡುವುದರಿಂದ ಹಾಲಿ ಶಾಸಕರ ಹಕ್ಕುಗಳಿಗೆ ಚ್ಯುತಿಯಾಗುತ್ತಿದೆ. ಶಾಸಕರಿಗೆ ತನ್ನದೇ ಆದ ಶಿಷ್ಟಾಚಾರಗಳಿದ್ದು, ಈ ಹಕ್ಕು ಉಲ್ಲಂಘನೆಯಾದರೆ ಯಾರಿಗೆ ಯಾವ ರೀತಿ ತಿಳಿಸಬೇಕೆಂಬುದರ ಬಗ್ಗೆ ಸ್ಪಷ್ಟತೆ ನನಗಿದೆ.ಜನರಿಂದ ಆಯ್ಕೆಯಾದ ಪ್ರತಿನಿಧಿಗಳ ಹಕ್ಕು ರಕ್ಷಣೆಗಾಗಿ ನಿಯಮಗಳಿವೆ. ನನ್ನ ಹಕ್ಕುಗಳಿಗೆ ಚ್ಯುತಿಯಾದ ಸಂದರ್ಭ, ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಲು ಅಡ್ಡಿಯಾದಾಗ ಹಕ್ಕುಚ್ಯುತಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಶಾಸಕ ಹರೀಶ್ ಪೂಂಜ ಸ್ಪಷ್ಟಪಡಿಸಿದ್ದಾರೆ.

ಮಾಜಿ ಶಾಸಕರು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರು, ಸಿಬ್ಬಂದಿಯನ್ನು ನಿಂದಿಸುವುದು, ತಹಸೀಲ್ದಾರ್ ಸಹಿತ ಅಧಿಕಾರಿಗಳ ಮೇಲೆ ಅಧಿಕಾರ ಚಲಾಯಿಸುವುದು-ನಿಂದಿಸುವುದು, ಸರ್ಕಾರಿ ಯೋಜನೆಗಳ ಉದ್ಘಾಟನೆ ಸಂದರ್ಭ ಆಮಂತ್ರಣ ಇಲ್ಲದಿದ್ದರೂ ಅನಧಿಕೃತವಾಗಿ ವೇದಿಕೆ ಹತ್ತಿ ಭಾಷಣ ಮಾಡುವುದು ಮತ್ತಿತರ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇನೆ.ಜನಪ್ರತಿನಿಧಿ ಅಲ್ಲದವರು ಅಧಿಕಾರ ಚಲಾಯಿಸುವಾಗ ಅಧಿಕಾರಿಗಳು ಅಸಹಾಯಕರಾಗುತ್ತಾರೆ. ಅಧಿಕಾರಿಗಳಿಗೆ ಅವರದ್ದೇ ಆದ ವೃತ್ತಿ ಗೌರವಗಳಿರುತ್ತವೆ. ಕಾಂಗ್ರೆಸ್‌ ಸರ್ಕಾರ ಇದೆ ಎಂಬ ಮಾತ್ರಕ್ಕೆ ಅಧಿಕಾರಿಗಳನ್ನು ಬಯ್ಯುವುದು ಸರಿಯಲ್ಲ. ಬಯ್ಯುವುದರಿಂದ ಎಲ್ಲವೂ ಸರಿಯಾಗುತ್ತದೆ ಎಂಬುದು ಭ್ರಮೆ. ಎಲ್ಲ ದುರಹಂಕಾರಕ್ಕೆ ಕೊನೆ ಇದ್ದೇ ಇದೆ. ಸೂಕ್ತ ಸಮಯ ಸಂದರ್ಭ ಬಂದಾಗ ಜನರೇ ಉತ್ತರ ನೀಡುತ್ತಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳ ಮಹತ್ವ ತಿಳಿದಿದ್ದರೆ ಮಾಜಿ ಶಾಸಕರು ಈ ರೀತಿ ಮಾಡುವುದಿಲ್ಲ. ತಿಳಿದೂ ತಿಳಿಯದ ರೀತಿಯಲ್ಲಿದ್ದರೆ ಅಂಥವರಿಗೆ ನಾವು ಬುದ್ಧಿ ಹೇಳುವ ಪ್ರಯತ್ನ ಮಾಡುವುದಿಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related posts

ರೂ. 2.00 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆ- ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಶಿಲಾನ್ಯಾಸ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಎಸ್.ಎಸ್.ಎಲ್.ಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿಷೇಕ್ ಗೆ ಬೆಳ್ತಂಗಡಿ ವಕೀಲರ ಸಂಘದಿಂದ ಸನ್ಮಾನ

Suddi Udaya

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆನ್ನುಹುರಿ ಅಪಘಾತಕ್ಕೆ ಒಳಾಗದವರಿಗೆ ರೂ. 5 ಸಾವಿರ ಮಾಸಾಶನ ನೀಡಲು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾ‌ರ್ ಆಗ್ರಹ

Suddi Udaya

ನಿಡ್ಲೆ ಪ್ರಾ. ಕೃ.ಪ. ಸ. ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ನಿಡ್ಲೆಯಲ್ಲಿ 34ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya
error: Content is protected !!