April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ

ಮಲೆಬೆಟ್ಟು : ಶ್ರೀರಾಮ ಭಜನಾ ಮಂಡಳಿ(ರಿ) ಮಲೆಬೆಟ್ಟು ಇದರ ವತಿಯಿಂದ ಭಜನಾ ಪರಿಷತ್ ಧರ್ಮಸ್ಥಳ ಇದರ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಇವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ವನದುರ್ಗೆ ದೇವಸ್ಥಾನ ಮಲೆಬೆಟ್ಟು ಇದರ ಆಡಳಿತ ಮೊಕ್ತೇಸರರಾದ ಗಣೇಶ್ ಭಟ್ ಕಾಂತಾಜ, ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀ ಕೃಷ್ಣ ಆಚಾರಿ ಮರಿಯ, ಕಾರ್ಯದರ್ಶಿಯಾದ ದೇಜಪ್ಪ ಪೂಜಾರಿ ಅಲನೆ , ಕೋಶಾಧಿಕಾರಿ ಚಂದ್ರಶೇಖರ ಗೌಡ ಮಲೆಬೆಟ್ಟು ಅಂತರ, ಕೇಶವ ಪೂಜಾರಿ ದೇವಸ, ವಿಶ್ವನಾಥ ಪೂಜಾರಿ ಗಾಳಿ ತೋಟ, ಮಕ್ಕಳ ಭಜನಾ ತಂಡದ ಉಸ್ತುವಾರಿ ಪ್ರಶಾಂತ್ ನಾಯ್ಕ ಹಾಗೂ ಭಜಕರು ಉಪಸ್ಥಿತರಿದ್ದರು.
ಭಜನಾ ಪರಿಷತ್ ನ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಇವರು ಭಜನೆಯ ಮಹತ್ವ ಹಾಗೂ ಭಜನಾ ಪರಿಷತ್ತಿನ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು
ದೇಜಪ್ಪ ಪೂಜಾರಿಯವರು ಸ್ವಾಗತಿಸಿದರು. ಗ್ರಾ ಪಂಚಾಯತ್ ಸದಸ್ಯ ಗಿರೀಶ್ ಆಚಾರಿಯವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ: ಕನ್ನಡ ಸಾಹಿತ್ಯ ಸಮ್ಮೇಳನವು ಸುವರ್ಣ ಕರ್ನಾಟಕದ ಆಶಯವನ್ನು ಬಿಂಬಿಸುವಂತಿರಲಿ: ಶಾಸಕ ಹರೀಶ್ ಪೂಂಜ

Suddi Udaya

ಅರಸಿನಮಕ್ಕಿ : ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಅಭಿನಂದನೆ

Suddi Udaya

ಅ.2: ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ

Suddi Udaya

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

25 ಕೋಟಿ ವೆಚ್ಚದಲ್ಲಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ: ಮುಂದಿನ ಮಾರ್ಚ್ ತಿಂಗಳಿನಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಂಕಲ್ಪ

Suddi Udaya

ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

Suddi Udaya
error: Content is protected !!