25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ

ಮಲೆಬೆಟ್ಟು : ಶ್ರೀರಾಮ ಭಜನಾ ಮಂಡಳಿ(ರಿ) ಮಲೆಬೆಟ್ಟು ಇದರ ವತಿಯಿಂದ ಭಜನಾ ಪರಿಷತ್ ಧರ್ಮಸ್ಥಳ ಇದರ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಇವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ವನದುರ್ಗೆ ದೇವಸ್ಥಾನ ಮಲೆಬೆಟ್ಟು ಇದರ ಆಡಳಿತ ಮೊಕ್ತೇಸರರಾದ ಗಣೇಶ್ ಭಟ್ ಕಾಂತಾಜ, ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀ ಕೃಷ್ಣ ಆಚಾರಿ ಮರಿಯ, ಕಾರ್ಯದರ್ಶಿಯಾದ ದೇಜಪ್ಪ ಪೂಜಾರಿ ಅಲನೆ , ಕೋಶಾಧಿಕಾರಿ ಚಂದ್ರಶೇಖರ ಗೌಡ ಮಲೆಬೆಟ್ಟು ಅಂತರ, ಕೇಶವ ಪೂಜಾರಿ ದೇವಸ, ವಿಶ್ವನಾಥ ಪೂಜಾರಿ ಗಾಳಿ ತೋಟ, ಮಕ್ಕಳ ಭಜನಾ ತಂಡದ ಉಸ್ತುವಾರಿ ಪ್ರಶಾಂತ್ ನಾಯ್ಕ ಹಾಗೂ ಭಜಕರು ಉಪಸ್ಥಿತರಿದ್ದರು.
ಭಜನಾ ಪರಿಷತ್ ನ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಇವರು ಭಜನೆಯ ಮಹತ್ವ ಹಾಗೂ ಭಜನಾ ಪರಿಷತ್ತಿನ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು
ದೇಜಪ್ಪ ಪೂಜಾರಿಯವರು ಸ್ವಾಗತಿಸಿದರು. ಗ್ರಾ ಪಂಚಾಯತ್ ಸದಸ್ಯ ಗಿರೀಶ್ ಆಚಾರಿಯವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ನ.30: ಬಜಿರೆ ಹೊಸಪಟ್ಣ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಆಶ್ರಯದಲ್ಲಿ ಹೊನಲು ಬೆಳಕಿನ ಪುರುಷರ 60 ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ರಾಜ್ಯದ ಜನರಿಗೆ ಬೆಲೆ ಏರಿಕೆ ಮೂಲಕ ಬರೆ ಎಳೆದ ಕಾಂಗ್ರೆಸ್ ಸರಕಾರ :ಉಚಿತ ಗ್ಯಾರಂಟಿಯ ಹೊರೆ ಭರಿಸಲಾದೆ ಸರ್ಕಾರ ದಿವಾಳಿ ಅಂಚಿಗೆ

Suddi Udaya

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಕಾಶಿಪಟ್ಣ ಸ.ಪ್ರೌ. ಶಾಲೆಯ ಶಿಕ್ಷಕಿ ಸೌಮ್ಯರವರಿಗೆ 4 ಬೆಳ್ಳಿ ಹಾಗೂ 1 ಕಂಚಿನ ಪದಕ

Suddi Udaya

ಬಂದಾರು: ಮನೆ ಮೇಲೆ ಕುಸಿದು ಬಿದ್ದ ಧರೆ

Suddi Udaya

ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ಮಹಾಸಭೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿ

Suddi Udaya

ವಾಣಿ ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾವಿಧಿ ಸ್ವೀಕಾರ

Suddi Udaya
error: Content is protected !!