25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ

ಮಲೆಬೆಟ್ಟು : ಶ್ರೀರಾಮ ಭಜನಾ ಮಂಡಳಿ(ರಿ) ಮಲೆಬೆಟ್ಟು ಇದರ ವತಿಯಿಂದ ಭಜನಾ ಪರಿಷತ್ ಧರ್ಮಸ್ಥಳ ಇದರ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಇವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ವನದುರ್ಗೆ ದೇವಸ್ಥಾನ ಮಲೆಬೆಟ್ಟು ಇದರ ಆಡಳಿತ ಮೊಕ್ತೇಸರರಾದ ಗಣೇಶ್ ಭಟ್ ಕಾಂತಾಜ, ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀ ಕೃಷ್ಣ ಆಚಾರಿ ಮರಿಯ, ಕಾರ್ಯದರ್ಶಿಯಾದ ದೇಜಪ್ಪ ಪೂಜಾರಿ ಅಲನೆ , ಕೋಶಾಧಿಕಾರಿ ಚಂದ್ರಶೇಖರ ಗೌಡ ಮಲೆಬೆಟ್ಟು ಅಂತರ, ಕೇಶವ ಪೂಜಾರಿ ದೇವಸ, ವಿಶ್ವನಾಥ ಪೂಜಾರಿ ಗಾಳಿ ತೋಟ, ಮಕ್ಕಳ ಭಜನಾ ತಂಡದ ಉಸ್ತುವಾರಿ ಪ್ರಶಾಂತ್ ನಾಯ್ಕ ಹಾಗೂ ಭಜಕರು ಉಪಸ್ಥಿತರಿದ್ದರು.
ಭಜನಾ ಪರಿಷತ್ ನ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಇವರು ಭಜನೆಯ ಮಹತ್ವ ಹಾಗೂ ಭಜನಾ ಪರಿಷತ್ತಿನ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು
ದೇಜಪ್ಪ ಪೂಜಾರಿಯವರು ಸ್ವಾಗತಿಸಿದರು. ಗ್ರಾ ಪಂಚಾಯತ್ ಸದಸ್ಯ ಗಿರೀಶ್ ಆಚಾರಿಯವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವ: ವಿಶೇಷ ಪೂಜೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

ಉಜಿರೆ: ಕಾಶಿಬೆಟ್ಟು ಬಳಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದ ಬೋಲೆರೋ ವಾಹನ

Suddi Udaya

ಬೆಳಾಲು: ಮಾಯ ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಮಂಗಳೂರು, ಇದರ ನಡುವೆ ಒಡಂಬಡಿಕೆ ಒಪ್ಪಂದ

Suddi Udaya
error: Content is protected !!