25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

ಬೆಳ್ತಂಗಡಿ: ವೇಣೂರು ಗ್ರಾಮದ ಗುಂಡೂರಿನ ನಿವಾಸಿ ಅನುಷಾ ಎಂಬುವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಸಂದರ್ಭ ವೇಣೂರು ಸರ್ಕಾರಿ ಆಸ್ಪತ್ರೆ ಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಸರಕಾರಿ ಲೇಡಿಗೋಸಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭ 108 ಆಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.

ಅನುಷಾರವರಿಗೆ ಮೂತ್ರ ಸೊಂಕಿನ ಸಮಸ್ಯೆ ಇದೆ ಎಂದು ಸಮುದಾಯ ಆರೋಗ್ಯ ಕೇಂದ್ರ ವೇಣೂರು ಇಲ್ಲಿಂದ ಮಂಗಳೂರು ಸರಕಾರಿ ಲೇಡಿಗೋಸಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗ್ಬೇಕು ಎಂದು ಎಮರ್ಜೆನ್ಸಿ ಕರೆ ಬಂದಿದ್ದ ಸಂದರ್ಭ ತಕ್ಷಣ ಕಾರ್ಯ ಪ್ರವೃತ್ತ ರಾದ ಬೆಳ್ತಂಗಡಿ 108 ಆಂಬುಲೆನ್ಸ್ ಸಿಬ್ಬಂದಿಗಳು ವೇಣೂರು ಆಸ್ಪತ್ರೆಯಿಂದ ರೋಗಿಯನ್ನು ಕರೆದುಕೊಂಡು ಹೋಗುವಷ್ಟರಲ್ಲಿ ರೋಗಿಯ ಚಲನ ವಲನ ಗಮನಿಸಿದ ತುರ್ತು ವೈದ್ಯಕೀಯ ತಜ್ಞ ಕೇಶವ. ಕೆ. ಅವರು ಆಂಬುಲೆನ್ಸ್ ಮಂಗಳೂರಿನ ಪಡೀಲ್ ತಲುಪುತಿದ್ದಂತೆ ಆಂಬುಲೆನ್ಸ್ ನಲ್ಲಿಯೇ ಬಹಳ ಕ್ಲಿಷ್ಟಕರವಾದ ಹೆರಿಗೆಯನ್ನು ಮಾಡಿ ಮಗುವನ್ನು ಮತ್ತು ತಾಯಿಯನ್ನು ಮಂಗಳೂರಿನ ಸರಕಾರಿ ಲೇಡಿಗೊಶನ್ ಆಸ್ಪತ್ರೆಗೆ ಬಹಳ ಸುರಕ್ಷಿತವಾಗಿ ದಾಖಲಿಸಿದರು.

ಕೇಶವ ಕೆ ಇವರು ಮಾಡಿದ ಸುರಕ್ಷಿತ 60ನೇ ಆಂಬುಲೆನ್ಸ್ ಹೆರಿಗೆಯಾಗಿರುತ್ತದೆ. ಬೆಳ್ತಂಗಡಿಗೆ ಹೊಸದಾಗಿ ಆಯ್ಕೆಗೊಂಡಿರುವ ಎಮರ್ಜೆನ್ಸಿ (ಪೈಲೆಟ್) ಚಾಲಕ ಮಂಜುನಾಥ್ ಎಚ್. ಕೆ. ಅವರು ಸಹಕರಿಸಿದರು.

Related posts

ಧರ್ಮಸ್ಥಳ  ಶ್ರೀ ಮಂ.ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ‘ಆಟಿಡೊಂಜಿ ದಿನ ‘

Suddi Udaya

ಬೆಳ್ತಂಗಡಿ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ದಿನಾಚರಣೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳಾ ಸಬಲೀಕರಣದ ಕುರಿತು ಉಪನ್ಯಾಸ

Suddi Udaya

ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ವಿವಿಧ ವಿಭಾಗಗಳ ಪರಿಶೀಲನೆ

Suddi Udaya

ಓಡೀಲು‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ

Suddi Udaya
error: Content is protected !!