July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

ಬೆಳ್ತಂಗಡಿ: ವೇಣೂರು ಗ್ರಾಮದ ಗುಂಡೂರಿನ ನಿವಾಸಿ ಅನುಷಾ ಎಂಬುವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಸಂದರ್ಭ ವೇಣೂರು ಸರ್ಕಾರಿ ಆಸ್ಪತ್ರೆ ಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಸರಕಾರಿ ಲೇಡಿಗೋಸಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭ 108 ಆಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.

ಅನುಷಾರವರಿಗೆ ಮೂತ್ರ ಸೊಂಕಿನ ಸಮಸ್ಯೆ ಇದೆ ಎಂದು ಸಮುದಾಯ ಆರೋಗ್ಯ ಕೇಂದ್ರ ವೇಣೂರು ಇಲ್ಲಿಂದ ಮಂಗಳೂರು ಸರಕಾರಿ ಲೇಡಿಗೋಸಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗ್ಬೇಕು ಎಂದು ಎಮರ್ಜೆನ್ಸಿ ಕರೆ ಬಂದಿದ್ದ ಸಂದರ್ಭ ತಕ್ಷಣ ಕಾರ್ಯ ಪ್ರವೃತ್ತ ರಾದ ಬೆಳ್ತಂಗಡಿ 108 ಆಂಬುಲೆನ್ಸ್ ಸಿಬ್ಬಂದಿಗಳು ವೇಣೂರು ಆಸ್ಪತ್ರೆಯಿಂದ ರೋಗಿಯನ್ನು ಕರೆದುಕೊಂಡು ಹೋಗುವಷ್ಟರಲ್ಲಿ ರೋಗಿಯ ಚಲನ ವಲನ ಗಮನಿಸಿದ ತುರ್ತು ವೈದ್ಯಕೀಯ ತಜ್ಞ ಕೇಶವ. ಕೆ. ಅವರು ಆಂಬುಲೆನ್ಸ್ ಮಂಗಳೂರಿನ ಪಡೀಲ್ ತಲುಪುತಿದ್ದಂತೆ ಆಂಬುಲೆನ್ಸ್ ನಲ್ಲಿಯೇ ಬಹಳ ಕ್ಲಿಷ್ಟಕರವಾದ ಹೆರಿಗೆಯನ್ನು ಮಾಡಿ ಮಗುವನ್ನು ಮತ್ತು ತಾಯಿಯನ್ನು ಮಂಗಳೂರಿನ ಸರಕಾರಿ ಲೇಡಿಗೊಶನ್ ಆಸ್ಪತ್ರೆಗೆ ಬಹಳ ಸುರಕ್ಷಿತವಾಗಿ ದಾಖಲಿಸಿದರು.

ಕೇಶವ ಕೆ ಇವರು ಮಾಡಿದ ಸುರಕ್ಷಿತ 60ನೇ ಆಂಬುಲೆನ್ಸ್ ಹೆರಿಗೆಯಾಗಿರುತ್ತದೆ. ಬೆಳ್ತಂಗಡಿಗೆ ಹೊಸದಾಗಿ ಆಯ್ಕೆಗೊಂಡಿರುವ ಎಮರ್ಜೆನ್ಸಿ (ಪೈಲೆಟ್) ಚಾಲಕ ಮಂಜುನಾಥ್ ಎಚ್. ಕೆ. ಅವರು ಸಹಕರಿಸಿದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಸಮುದಾಯ ಭವನದ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

Suddi Udaya

ಸುನ್ನೀ ಜಂ-ಇಯ್ಯತುಲ್ ಮುಅಲ್ಲಿಮೀನ್ ಎಸ್.ಜೆ ಎಮ್ ಮುರ ರೇಂಜ್-324 ವಾರ್ಷಿಕ ಮಹಾಸಭೆ

Suddi Udaya

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ ಭಗವದ್ಗೀತಾ ಅಭಿಯಾನ -2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತೆ ಸ್ಪರ್ಧೆಗಳ ಉದ್ಘಾಟನೆ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಭಾರತೀಯ ಅಂಚೆ ಇಲಾಖೆ ಅಪಘಾತ ವಿಮೆ ನೋಂದಾವನಾ ಪ್ರಕ್ರಿಯೆ

Suddi Udaya

ಗುರಿಪಳ್ಳ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗಿಡನಾಟಿ, ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!