September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

ಬೆಳ್ತಂಗಡಿ: ವೇಣೂರು ಗ್ರಾಮದ ಗುಂಡೂರಿನ ನಿವಾಸಿ ಅನುಷಾ ಎಂಬುವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಸಂದರ್ಭ ವೇಣೂರು ಸರ್ಕಾರಿ ಆಸ್ಪತ್ರೆ ಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಸರಕಾರಿ ಲೇಡಿಗೋಸಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭ 108 ಆಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.

ಅನುಷಾರವರಿಗೆ ಮೂತ್ರ ಸೊಂಕಿನ ಸಮಸ್ಯೆ ಇದೆ ಎಂದು ಸಮುದಾಯ ಆರೋಗ್ಯ ಕೇಂದ್ರ ವೇಣೂರು ಇಲ್ಲಿಂದ ಮಂಗಳೂರು ಸರಕಾರಿ ಲೇಡಿಗೋಸಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗ್ಬೇಕು ಎಂದು ಎಮರ್ಜೆನ್ಸಿ ಕರೆ ಬಂದಿದ್ದ ಸಂದರ್ಭ ತಕ್ಷಣ ಕಾರ್ಯ ಪ್ರವೃತ್ತ ರಾದ ಬೆಳ್ತಂಗಡಿ 108 ಆಂಬುಲೆನ್ಸ್ ಸಿಬ್ಬಂದಿಗಳು ವೇಣೂರು ಆಸ್ಪತ್ರೆಯಿಂದ ರೋಗಿಯನ್ನು ಕರೆದುಕೊಂಡು ಹೋಗುವಷ್ಟರಲ್ಲಿ ರೋಗಿಯ ಚಲನ ವಲನ ಗಮನಿಸಿದ ತುರ್ತು ವೈದ್ಯಕೀಯ ತಜ್ಞ ಕೇಶವ. ಕೆ. ಅವರು ಆಂಬುಲೆನ್ಸ್ ಮಂಗಳೂರಿನ ಪಡೀಲ್ ತಲುಪುತಿದ್ದಂತೆ ಆಂಬುಲೆನ್ಸ್ ನಲ್ಲಿಯೇ ಬಹಳ ಕ್ಲಿಷ್ಟಕರವಾದ ಹೆರಿಗೆಯನ್ನು ಮಾಡಿ ಮಗುವನ್ನು ಮತ್ತು ತಾಯಿಯನ್ನು ಮಂಗಳೂರಿನ ಸರಕಾರಿ ಲೇಡಿಗೊಶನ್ ಆಸ್ಪತ್ರೆಗೆ ಬಹಳ ಸುರಕ್ಷಿತವಾಗಿ ದಾಖಲಿಸಿದರು.

ಕೇಶವ ಕೆ ಇವರು ಮಾಡಿದ ಸುರಕ್ಷಿತ 60ನೇ ಆಂಬುಲೆನ್ಸ್ ಹೆರಿಗೆಯಾಗಿರುತ್ತದೆ. ಬೆಳ್ತಂಗಡಿಗೆ ಹೊಸದಾಗಿ ಆಯ್ಕೆಗೊಂಡಿರುವ ಎಮರ್ಜೆನ್ಸಿ (ಪೈಲೆಟ್) ಚಾಲಕ ಮಂಜುನಾಥ್ ಎಚ್. ಕೆ. ಅವರು ಸಹಕರಿಸಿದರು.

Related posts

ಬೆಳಾಲು ಗ್ರಾ. ಪಂ. ಅಧ್ಯಕ್ಷರಾಗಿ ವಿದ್ಯಾಶ್ರೀನಿವಾಸ ಹಾಗೂ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

Suddi Udaya

ಬಳಂಜ: ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

Suddi Udaya

ನಾವೂರು ನವೋದಯ ಯುವಕ ಮಂಡಲ ವತಿಯಿಂದ “ಆಟಿ ಸುಗಿಪು”; ಸಾಂಪ್ರದಾಯಿಕ ಆಟಿ ಕಷಾಯ ಹಾಗೂ ತಜೆಂಕ್ ದೋಸೆ ವಿತರಣೆ

Suddi Udaya

ಡಿ.27: ನಾವೂರುನಲ್ಲಿ 40ನೇ ವರ್ಷದ ಅಯ್ಯಪ್ಪ ದೀಪೋತ್ಸವ: ‘ಹರಿವರಾಸನಂ’ ಗೀತೆಯ ಶತಾಬ್ಧಿ ಕಾರ್ಯಕ್ರಮ – ಪಂದಳರಾಜ ಶಶಿಕುಮಾರ ವರ್ಮ ನಾವೂರುಗೆ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ : ಎಸ್.ಡಿ ಎಂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟಕ್ಕೆ ಆಯ್ಕೆ

Suddi Udaya

ಹೆರಿಗೆ ನಂತರ ವಿಪರೀತ ರಕ್ತಸ್ರಾವ: ಲಾಯಿಲ ಗಾಂಧಿ ನಗರದ ಮಹಿಳೆ ಸಾವು

Suddi Udaya
error: Content is protected !!