July 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

ಬೆಳ್ತಂಗಡಿ: ಇಲ್ಲಿನ ಪ್ರಸನ್ನ ಆಂಗ್ಲ ಮಾಧ್ಯಮ ವಸತಿ ಶಾಲೆ ಇದರ 2023-24ನೇ ಶೈಕ್ಷಣಿಕ ಸಾಲಿನ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಜೂ. 24ರಂದು ನೆರವೇರಿತು.

ದೀಪ ಪ್ರಜ್ವಲನ ಮಾಡಿದ ಪ್ರಸನ್ನ ಶಿಕ್ಷಕರ ಶಿಕ್ಷಣ ತರಬೇತಿ ಸಂಸ್ಥೆಯ ಉಪ ಪ್ರಾಂಶುಪಾಲರಾದ ಶ್ರೀನಿವಾಸ್, ಇವರು ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟದ ವಿಕಾಸಕ್ಕೆ ಸಂಘಗಳು ಪೂರಕವಾಗಿವೆ ಎಂದು ಅಭಿಪ್ರಾಯ ಪಟ್ಟರು. ಪ್ರಸ್ತಾವನೆಗೈದ ಪ್ರಸನ್ನ ಆಂಗ್ಲ ಮಾಧ್ಯಮ ಶಾಲಾ ಪ್ರಾಂಶುಪಾಲರಾದ ಕೆ. ಶಂಕರ್ ನಾರಾಯಣ್ ಭಟ್, ವಿದ್ಯಾರ್ಥಿಗಳ ಶೈಕ್ಷಣಿಕ ಒತ್ತಡವನ್ನು ನಿವಾರಿಸುವಲ್ಲಿ ಸಂಘಗಳು ಕಾರ್ಯಪ್ರವೃತ್ತರಾಗಲಿವೆ ಎಂದರು.

ಶಿಕ್ಷಕಿ ಭಾರತಿ. ಎನ್ ಸ್ವಾಗತಿಸಿದ ಸಭೆಗೆ, ವಿದ್ಯಾರ್ಥಿಗಳಾದ ಅಕ್ಷಾ ಶೆಟ್ಟಿ, ಆಯಿಷಾ, ಸಂಜ್ಞಾ, ನಹ್ಲಾ, ಐಸಿರಿ ಚೇತನ್, ಶಮ್ನಾ ಪ್ರಾರ್ಥಿಸಿ, ಶಿಕ್ಷಕಿ ಜೆರುಶಾ ಪ್ರತಿಜ್ಞಾ ವಿಧಿ ಬೋಧಿಸಿ, ಶಿಕ್ಷಕಿ ಮಿಲನಾ ಕೆ ಧನ್ಯವಾದವಿತ್ತು, ಶಿಕ್ಷಕ , ಅಶ್ವತ್ ಎನ್ ಸಂಘಗಳನ್ನು ರಚಿಸಿ, ಎಂ. ಕೆ ಕನ್ಯಾಡಿ ನಿರೂಪಿಸಿದರು.

ಶಿಕ್ಷಕರುಗಳಾದ ಪ್ರಭಾವತಿ, ಋತ್ವಿಕಾ, ಭಾರತಿ ಎನ್, ಪದ್ಮಲತಾ, ಮಿಲನಾ ಕೆ, ಅನುಪಮಾ, ರೂಪಶ್ರೀ, ಶಿವರಾಮ್ ಕೆ, ಅಶ್ವತ್ ಎನ್ ಸಂಘಗಳ ಯೋಜನೆ ಪ್ರಸ್ತಾಪಿಸಿದರು.

Related posts

ಬೆಳ್ತಂಗಡಿ: ನೇಮಿರಾಜ್ ಬುಣ್ಣು ನಿಧನ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ: ನಾಲ್ವರು ಯಕ್ಷಗಾನ ತರಬೇತಿ ಗುರುಗಳಿಗೆ ಗೌರವಾರ್ಪಣೆ: 8 ಶಾಲೆಗಳು 480 ಯಕ್ಷ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಭಜನೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಣೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್

Suddi Udaya
error: Content is protected !!