25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು: ಫೆ.22 ರಿಂದ ಮಾರ್ಚ್ 1ರ ವರೆಗೆ ವೇಣೂರು ಬಾಹುಬಲಿಗೆ ಮಹಾಮಸ್ತಕಾಭಿಷೇಕ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಮಹಾಮಸ್ತಕಾಭಿಷೇಕದ ದಿನ ಘೋಷಣೆ

ವೇಣೂರು: ಶ್ರೀ ದಿಗಂಬರ ಜೈನ ತೀರ್ಥ ಕೇತ್ರ ಸಮಿತಿ ವೇಣೂರು ವತಿಯಿಂದ 2024 ರ ಫೆಬ್ರವರಿಯಲ್ಲಿ ನಡೆಯಲಿರುವ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭೀಷೇಕ ಕುರಿತು ಶ್ರಾವಕರ ಸಮಾಲೋಚನಾ ಸಭೆ ಜೂ.24 ರಂದು ವೇಣೂರು ಶ್ರೀ ಬಾಹುಬಲಿ ಸಭಾಭವನದಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮವನ್ನು‌ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಹಾಮಸ್ತಕಾಭಿಷೇಕದ ದಿನಾಂಕವನ್ನು ಘೋಷಣೆ ಮಾಡಿದರು.

2024 ರ ಫೆಬ್ರವರಿ 22 ರಿಂದ ಮಾರ್ಚ್ 1 ರ ತನಕ ವೇಣೂರು ಬಾಹುಬಲಿಗೆ ಮಹಾಮಜ್ಜನ ನಡೆಯಲಿದೆ. ಸಮಿತಿಯಲ್ಲಿ ಯುವಕರು ಹೆಚ್ಚಾಗಿ ಬರುಬೇಕು, 27 ಸಮಿತಿಗಳನ್ನು ರಚಿಸಲಾಗಿದ್ದು ಉತ್ತಮ ರೀತಿಯಲ್ಲಿ ಕಾರ್ಯಕ್ರಮ ಮೂಡಿಬರಲಿದೆ ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಹಕರಿಸಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿಗಳು, ಸಮಿತಿ ಅಧ್ಯಕ್ಷರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದರು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲರು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಅಭಯಚಂದ್ರ ಜೈನ್ , ಎಂ.ಕೆ.ವಿಜಯ ಕುಮಾರ್, ಸಮಿತಿಯ ಮುಖ್ಯಸ್ಥರಾದ ಪ್ರವೀಣ್ ಕುಮಾರ್ ಇಂದ್ರ, ಇನ್ನಿತರ ಗಣ್ಯರು , ಶ್ರಾವಕ, ಶ್ರಾವಕಿಯರು ಉಪಸ್ಥಿತರಿದ್ದರು.

Related posts

ಪಡಂಗಡಿ: 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಭೀಕರ ಗಾಳಿ -ಮಳೆ: ಬೆಳ್ತಂಗಡಿ ಸೈಂಟ್ ತೆರೇಸಾ ಕಾನ್ವೆಂಟ್ ಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ: ಸಾಧಕರಿಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರ ಸಭೆ

Suddi Udaya

ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ 35 ನೇ ವರ್ಷದ ಶಾರದೋತ್ಸವ ಆರಂಭ

Suddi Udaya
error: Content is protected !!