ಶ್ರೀ ಗುರುದೇವಾ ದತ್ತಾಂಜನೆಯ ಭಜನೆ ಸಮಿತಿಯಿಂದ ಸಮಾಜ ಮುಖಿ ಕಾರ್ಯ: ಕರಂಬಾರು ಅಂಗನವಾಡಿ ಕೇಂದ್ರಕ್ಕೆ ನೀರಿನ ಟ್ಯಾಂಕ್ ಹಸ್ತಾಂತರ

Suddi Udaya

ಕರಂಬಾರು ಶ್ರೀ ಗುರುದೇವಾ ದತ್ತಾಂಜನೆಯ ಭಜನೆ ಸಮಿತಿ ಸುಮಾರು 25 ವರ್ಷಗಳಿಂದ ವಿದ್ಯಾ ನಿಧಿ ಪುಸ್ತಕ ವಿತರಣೆ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಹತ್ತು ಹಲವಾರು ಸೇವೆಗಳನ್ನು ಮಾಡುಕೊಂಡು ಬಂದಿರುವಂತ ಸಮಿತಿಯಿಂದ ಕರಂಬಾರು ಅಂಗನವಾಡಿ ಕೇಂದ್ರಕ್ಕೆ ಅಗತ್ಯತೆ ಇರುವ ನೀರಿನ ಟ್ಯಾಂಕ್ ನ್ನು ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಭಜನೆ ಸಮಿತಿಯ ಅಧ್ಯಕ್ಷ ಹರೀಶ್ ಕಲ್ಲಾಜೆ ಮಾತನಾಡಿ ಸುಮಾರು 25 ವರ್ಷಗಳಿಂದ ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಬಂದಿರುವ ಭಜನೆ ಸಮಿತಿ ಇಂದು ಅಗತ್ಯತೆ ಇರುವ ನೀರಿನ ಟ್ಯಾಂಕ್ ಕೊಡುಗೆಯನ್ನು ನೀಡಿರುತ್ತೇವೆ ಮುಂದಿನ ದಿನಗಳಲ್ಲಿ ಈ ಒಂದು ಅಂಗನವಾಡಿ ಕೇಂದ್ರಕ್ಕೆ ಅಭಿವೃದ್ಧಿ ವಿಷಯದಲ್ಲಿ ನಮ್ಮ ಸಂಪೂರ್ಣ ಸಹಕಾರ ಇದೆ ಸಹಕಾರ ನೀಡಿದ ಬಜನೆ ಸಮಿತಿಯ ಸರ್ವ ಸದಸ್ಯರಿಗೂ ಅಭಿನಂದನೆ ಸಲ್ಲಿಸಿದರು.

ಈ ಒಂದು ಕಾರ್ಯಕ್ರಮದಲ್ಲಿ ಅಂಗನವಾಡಿ ಅಧ್ಯಕ್ಷೆ ಜಯಶ್ರೀ ಸತೀಶ್ ಪೂಜಾರಿ. ಪಂಚಾಯತ್ ಸದಸ್ಯರಾದ ಪ್ರಕಾಶ್ ಹೆಗ್ಡೆ ಅಂಗನವಾಡಿ ಟೀಚರ್ ಲಾವಣ್ಯ ಭಜನೆ ಸಮಿತಿ ಗೌರವ ಅಧ್ಯಕ್ಷ ಲೋಕೇಶ್ ಕಲ್ಲಾಜೆ ಭಜನೆ ಸಮಿತಿಯ ಪ್ರದಾನ ಕಾರ್ಯದರ್ಶಿ ಯತೀಶ್ ಪೂಜಾರಿ ಸಂಚಾಲಕರಾದ ಅಶೋಕ್ ಟೈಲರ್ ಸಲಹೆ ಸಮಿತಿಯ ಸದಸ್ಯರಾದ ಪ್ರತಪ್ ಪೂಜಾರಿ, ಪ್ರಸಾದ್ ಕುಮಾರ್, ಪದ್ಮನಾಭ ಕುಲಾಲ್ ಬಿಡಿನಬೆಟ್ಟು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Leave a Comment

error: Content is protected !!