25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ ಬೆಳ್ತಂಗಡಿ ಶಾಖೆಗೆ ವರ್ಗಾವಣೆ: ಗ್ರಾಹಕರು ಹಾಗೂ ಸಿಬ್ಬಂದಿಗಳಿಂದ ಬಿಳ್ಕೋಡುಗೆ ಸಮಾರಂಭ

ನಾರಾವಿ: ಕಳೆದ ನಾಲ್ಕು ವರ್ಷಗಳಿಂದ ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಲ್ಲಿ ಶಾಖಾ ವ್ಯವಸ್ಥಾಪಕರಾಗಿ ಅತ್ಯುತ್ತಮ ಸೇವೆ ಸಲ್ಲಿಸಿ ಇದೀಗ ಬೆಳ್ತಂಗಡಿ ಎಸ್.ಸಿ.ಡಿ.ಸಿ.ಸಿ ಶಾಖೆಗೆ ವರ್ಗಾವಣೆಗೊಂಡಿರುವ ಸುಧೀರ್ ಎಸ್ ಪಿ ಅವರಿಗೆ ಬೀಳ್ಕೊಡುಗೆ ಸಮಾರಂಭವು ನಾರಾವಿ ಶಾಖೆಯಲ್ಲಿ ನಡೆಯಿತು.

ಸುಧೀರ್ ಎಸ್.ಪಿ ಅವರು ಮಡಂತ್ಯಾರು ಶಾಖೆಯಲ್ಲಿ ಮ್ಯಾನೇಜರ್ ಆಗಿ ನಂತರ ನಾರಾವಿ ಶಾಖೆಯಲ್ಲಿಯೂ ಮ್ಯಾನೇಜರ್ ಆಗಿ ತನ್ನ ಕರ್ತವ್ಯವನ್ನು ಅತ್ಯಂತ ಪ್ರಾಮಾಣಿಕೆಯಿಂದ ಸಲ್ಲಿಸಿ, ನಗುಮೊಗದ ಸೇವೆ ನೀಡಿ ಎಲ್ಲ ಗ್ರಾಹಕರ ಮೆಚ್ಚುಗೆ ಗಳಿಸಿದ್ದರು.ಈ ಸಂದರ್ಭದಲ್ಲಿ ಸುಗಮ ಕಾಂಪ್ಲೆಕ್ಸ್ ಮಾಲಕ ಪ್ರಕಾಶ್ ಜೈನ್,ನಾರಾವಿ ಸಿ.ಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಡಾರಿ, ನಾರಾವಿ ಸಿ.ಎ ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಕಾಂತ್ ಜೈನ್,ಎಸ್.ಸಿ.ಡಿ‌.ಸಿ.ಸಿ ಬ್ಯಾಂಕಿನ ಅಧಿಕಾರಿ ಮಾಲಾ ಎಂ.ಕೆ,ಎಸ್.ಸಿ‌ಡಿ.ಸಿ.ಸಿ ಶಾಖೆಯ ಹಾಗೂ ಸಿಎ ಬ್ಯಾಂಕ್ ನ ಸಿಬ್ಬಂದಿಗಳಿ, ಗ್ರಾಹಕರು ಉಪಸ್ಥಿತರಿದ್ದು ಗೌರವಿಸಿದರು.

Related posts

ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಹಿಲನ್ ಧಿಡೀರ್ ಭೇಟಿ

Suddi Udaya

ಜೂ 1: ಪುತ್ತೂರಿನಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸರ್ವಸದಸ್ಯರುಗಳ ಮಹಾಅಧಿವೇಶನ ಮತ್ತು ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಅಜ್ಞಾತ ಸಂತ ಹರ್ಡೇಕರ್ ಮಂಜಪ್ಪ ಪುಸ್ತಕ ಬಿಡುಗಡೆ

Suddi Udaya

ಸೋಣಂದೂರು ಸ ಹಿ ಪ್ರಾ ಶಾಲೆಯಲ್ಲಿ ಮಕ್ಕಳ ಹಬ್ಬ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಕೊಯ್ಯೂರು ಗ್ರಾ.ಪಂ. ಅಧ್ಯಕ್ಷರಾಗಿ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya

ಉಜಿರೆ: ಪಾದಚಾರಿಗಳ ಮೇಲೆ ಹರಿದ ಲಾರಿ: ಇಬ್ಬರು ಸಾವು

Suddi Udaya
error: Content is protected !!