26.4 C
ಪುತ್ತೂರು, ಬೆಳ್ತಂಗಡಿ
September 9, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

ಬೆಳ್ತಂಗಡಿ: ಇಲ್ಲಿನ ಪ್ರಸನ್ನ ಆಂಗ್ಲ ಮಾಧ್ಯಮ ವಸತಿ ಶಾಲೆ ಇದರ 2023-24ನೇ ಶೈಕ್ಷಣಿಕ ಸಾಲಿನ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಜೂ. 24ರಂದು ನೆರವೇರಿತು.

ದೀಪ ಪ್ರಜ್ವಲನ ಮಾಡಿದ ಪ್ರಸನ್ನ ಶಿಕ್ಷಕರ ಶಿಕ್ಷಣ ತರಬೇತಿ ಸಂಸ್ಥೆಯ ಉಪ ಪ್ರಾಂಶುಪಾಲರಾದ ಶ್ರೀನಿವಾಸ್, ಇವರು ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟದ ವಿಕಾಸಕ್ಕೆ ಸಂಘಗಳು ಪೂರಕವಾಗಿವೆ ಎಂದು ಅಭಿಪ್ರಾಯ ಪಟ್ಟರು. ಪ್ರಸ್ತಾವನೆಗೈದ ಪ್ರಸನ್ನ ಆಂಗ್ಲ ಮಾಧ್ಯಮ ಶಾಲಾ ಪ್ರಾಂಶುಪಾಲರಾದ ಕೆ. ಶಂಕರ್ ನಾರಾಯಣ್ ಭಟ್, ವಿದ್ಯಾರ್ಥಿಗಳ ಶೈಕ್ಷಣಿಕ ಒತ್ತಡವನ್ನು ನಿವಾರಿಸುವಲ್ಲಿ ಸಂಘಗಳು ಕಾರ್ಯಪ್ರವೃತ್ತರಾಗಲಿವೆ ಎಂದರು.

ಶಿಕ್ಷಕಿ ಭಾರತಿ. ಎನ್ ಸ್ವಾಗತಿಸಿದ ಸಭೆಗೆ, ವಿದ್ಯಾರ್ಥಿಗಳಾದ ಅಕ್ಷಾ ಶೆಟ್ಟಿ, ಆಯಿಷಾ, ಸಂಜ್ಞಾ, ನಹ್ಲಾ, ಐಸಿರಿ ಚೇತನ್, ಶಮ್ನಾ ಪ್ರಾರ್ಥಿಸಿ, ಶಿಕ್ಷಕಿ ಜೆರುಶಾ ಪ್ರತಿಜ್ಞಾ ವಿಧಿ ಬೋಧಿಸಿ, ಶಿಕ್ಷಕಿ ಮಿಲನಾ ಕೆ ಧನ್ಯವಾದವಿತ್ತು, ಶಿಕ್ಷಕ , ಅಶ್ವತ್ ಎನ್ ಸಂಘಗಳನ್ನು ರಚಿಸಿ, ಎಂ. ಕೆ ಕನ್ಯಾಡಿ ನಿರೂಪಿಸಿದರು.

ಶಿಕ್ಷಕರುಗಳಾದ ಪ್ರಭಾವತಿ, ಋತ್ವಿಕಾ, ಭಾರತಿ ಎನ್, ಪದ್ಮಲತಾ, ಮಿಲನಾ ಕೆ, ಅನುಪಮಾ, ರೂಪಶ್ರೀ, ಶಿವರಾಮ್ ಕೆ, ಅಶ್ವತ್ ಎನ್ ಸಂಘಗಳ ಯೋಜನೆ ಪ್ರಸ್ತಾಪಿಸಿದರು.

Related posts

ಇಳಂತಿಲ ಗ್ರಾ.ಪಂ. ಗ್ರಾಮ ಸಭೆ

Suddi Udaya

ಉಜಿರೆ: ಗ್ರಾ.ಪಂ ಮಾಜಿ ಸದಸ್ಯ ಮುಹಮ್ಮದ್‌ ಕುಂಞಿ ನಿಧನ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ಕಾರ್ಯದರ್ಶಿ ಸರೋಜಿನಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ

Suddi Udaya

ವಿದ್ಯುತ್ ತಂತಿಗೆ ತಾಗಿದ ಕಾಂಕ್ರೀಟ್ ಮಿಕ್ಸಿಂಗ್ ಲಾರಿ : ರಸ್ತೆಗೆ ಉರುಳಿದ ಎರಡು ವಿದ್ಯುತ್ ಕಂಬ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

Suddi Udaya
error: Content is protected !!