25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

ಬೆಳ್ತಂಗಡಿ: ಇಲ್ಲಿನ ಪ್ರಸನ್ನ ಆಂಗ್ಲ ಮಾಧ್ಯಮ ವಸತಿ ಶಾಲೆ ಇದರ 2023-24ನೇ ಶೈಕ್ಷಣಿಕ ಸಾಲಿನ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಜೂ. 24ರಂದು ನೆರವೇರಿತು.

ದೀಪ ಪ್ರಜ್ವಲನ ಮಾಡಿದ ಪ್ರಸನ್ನ ಶಿಕ್ಷಕರ ಶಿಕ್ಷಣ ತರಬೇತಿ ಸಂಸ್ಥೆಯ ಉಪ ಪ್ರಾಂಶುಪಾಲರಾದ ಶ್ರೀನಿವಾಸ್, ಇವರು ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟದ ವಿಕಾಸಕ್ಕೆ ಸಂಘಗಳು ಪೂರಕವಾಗಿವೆ ಎಂದು ಅಭಿಪ್ರಾಯ ಪಟ್ಟರು. ಪ್ರಸ್ತಾವನೆಗೈದ ಪ್ರಸನ್ನ ಆಂಗ್ಲ ಮಾಧ್ಯಮ ಶಾಲಾ ಪ್ರಾಂಶುಪಾಲರಾದ ಕೆ. ಶಂಕರ್ ನಾರಾಯಣ್ ಭಟ್, ವಿದ್ಯಾರ್ಥಿಗಳ ಶೈಕ್ಷಣಿಕ ಒತ್ತಡವನ್ನು ನಿವಾರಿಸುವಲ್ಲಿ ಸಂಘಗಳು ಕಾರ್ಯಪ್ರವೃತ್ತರಾಗಲಿವೆ ಎಂದರು.

ಶಿಕ್ಷಕಿ ಭಾರತಿ. ಎನ್ ಸ್ವಾಗತಿಸಿದ ಸಭೆಗೆ, ವಿದ್ಯಾರ್ಥಿಗಳಾದ ಅಕ್ಷಾ ಶೆಟ್ಟಿ, ಆಯಿಷಾ, ಸಂಜ್ಞಾ, ನಹ್ಲಾ, ಐಸಿರಿ ಚೇತನ್, ಶಮ್ನಾ ಪ್ರಾರ್ಥಿಸಿ, ಶಿಕ್ಷಕಿ ಜೆರುಶಾ ಪ್ರತಿಜ್ಞಾ ವಿಧಿ ಬೋಧಿಸಿ, ಶಿಕ್ಷಕಿ ಮಿಲನಾ ಕೆ ಧನ್ಯವಾದವಿತ್ತು, ಶಿಕ್ಷಕ , ಅಶ್ವತ್ ಎನ್ ಸಂಘಗಳನ್ನು ರಚಿಸಿ, ಎಂ. ಕೆ ಕನ್ಯಾಡಿ ನಿರೂಪಿಸಿದರು.

ಶಿಕ್ಷಕರುಗಳಾದ ಪ್ರಭಾವತಿ, ಋತ್ವಿಕಾ, ಭಾರತಿ ಎನ್, ಪದ್ಮಲತಾ, ಮಿಲನಾ ಕೆ, ಅನುಪಮಾ, ರೂಪಶ್ರೀ, ಶಿವರಾಮ್ ಕೆ, ಅಶ್ವತ್ ಎನ್ ಸಂಘಗಳ ಯೋಜನೆ ಪ್ರಸ್ತಾಪಿಸಿದರು.

Related posts

ಬೆಳ್ತಂಗಡಿ ಜನಜಾಗೃತಿ ವೇದಿಕೆ ಆರ್ಥಿಕ ವರ್ಷದ ಪ್ರಥಮ ಸಭೆ: ನೂತನ ವರ್ಷದ ಕ್ರಿಯಾಯೋಜನೆಗೆ ಮಂಜೂರಾತಿ

Suddi Udaya

ಯಕ್ಷಭಾರತಿಯಿಂದ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ಮತ್ತು ತಾಳಮದ್ದಳೆ

Suddi Udaya

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ಬ್ಯೂಟಿ ಅಂಡ್ ವೆಲ್ನೆಸ್ ನ ಉಪನ್ಯಾಸಕಿ ಪುಷ್ಪಲತಾ ರಿಗೆ “ಗುರುವೇ ನಮಃ” ಅವಾರ್ಡ್

Suddi Udaya

ಒಂದು ವರ್ಷದಿಂದ ನಾಪತ್ತೆಯಾಗಿದ್ದ ಗೇರುಕಟ್ಟೆಯ ಸತೀಶ್ ರವರು ಮಂಗಳೂರಿನ ಲಾಡ್ಜಿನಲ್ಲಿ ಆತ್ಮಹತ್ಯೆ

Suddi Udaya
error: Content is protected !!