37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ನಡ: ಸರಕಾರಿ ಪ್ರೌಢಶಾಲೆ ನಡ ಇದರ 2023-24ನೇ ಸಾಲಿನ ಪ್ರಥಮ ಪೋಷಕರ ಸಭೆಯನ್ನು ಜೂ.23 ರಂದು ನಡೆಸಲಾಯಿತು.

ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಸುಧಾಕರ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ವಿದ್ಯಾರ್ಥಿಗಳ ಕಲಿಕಾ ಪ್ರಗತಿಯ ಬಗ್ಗೆ ಹಾಗೂ ವಿಶೇಷವಾಗಿ ಶಾಲೆಯ ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಯಿತು.

ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಸಭೆಯಲ್ಲಿ ಆಂಗ್ಲ ಭಾಷಾ ಶಿಕ್ಷಕಿ ಶ್ರೀಮತಿ ಜಯಂತಿ ಸ್ಟ್ರೆಲ್ಲಾ ಸ್ವಾಗತ ಕೋರಿದರು. ಸಭೆಯಲ್ಲಿ ನಿಕಟ ಪೂರ್ವ ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಧರ್ಣೇಂದ್ರ ಜೈನ್ ಮಾತಾಡಿ ಪೋಷಕರು ಈ ಸಾಲಿನಲ್ಲಿ ಶಾಲೆಗೆ ಅಡಿಕೆ ತೋಟವನ್ನು ನಿರ್ಮಿಸುವ ಬೇಡಿಕೆಯನ್ನಿತ್ತರು. ಪ್ರಾಸ್ತಾವಿಕವಾಗಿ ಮಾತಾಡಿದ ಶಿಕ್ಷಕ ಶಿವಪುತ್ರ ಸುಣಗಾರ್ ಶಾಲೆಯು ನಡೆದು ಬಂದ ಹಾದಿಯ ಬಗ್ಗೆ ಬೆಳಕು ಚೆಲ್ಲಿದರು.

ಮುಖ್ಯಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ಇವರು ಮಕ್ಕಳ ಪ್ರಗತಿಯ ಬಗ್ಗೆ ಹಾಗೂ ಶಾಲಾಭಿವೃದ್ದಿ ಯೋಜನೆಯ ಬಗ್ಗೆ ಪೋಷಕರಿಗೆ ವಿವರಿಸಿದರು. ಚರ್ಚಾ ಸಮಯದಲ್ಲಿ ಭಾಗವಹಿಸಿದ ಪೋಷಕರು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ವೇದಿಕೆಯಲ್ಲಿ ಎಸ್.ಡಿ.ಎಂ.ಸಿ. ಸದಸ್ಯರುಗಳಾದ ಲಕ್ಷ್ಮಣ ನಾಯ್ಕ, ಆನಂದ ಶೆಟ್ಟಿ, ಶ್ರೀಮತಿ ಚೇತನಾ, ಶ್ರೀಮತಿ ಪ್ರೇಮ ಹೊಕ್ಕಿಲ, ಶ್ರೀಮತಿ ಪ್ರೇಮ ಕೆಳಗಿನ ಸುರ್ಯ ಉಪಸ್ಥಿತರಿದ್ದರು.

ಹಿಂದಿ ಶಿಕ್ಷಕ ಮೋಹನ ಬಾಬು ಧನ್ಯವಾದವಿತ್ತರು. ವಿಜ್ಞಾನ ಶಿಕ್ಷಕಿ ಶ್ರೀಮತಿ ಶೋಭಾ ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ

Suddi Udaya

ಬೆಂಗಳೂರಿನ ಬಾಷ್ ಕಂಪೆನಿಯ ತಂಡ ಸೇವಾನಿಕೇತನಕ್ಕೆ ಭೇಟಿ

Suddi Udaya

ಪುದುವೆಟ್ಟು: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿತುಳು ನಾಡು-ನುಡಿ-ಸಂಸ್ಕೃತಿ ಒರಿಪಾವುನ ಬುಳೆಪಾವುನ ಮಾರ್ಗೋಪಾಯೊಲು” ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ವೇಣೂರು: ಪೆರ್ಮುಡದಲ್ಲಿ 31ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

Suddi Udaya
error: Content is protected !!