23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ನಡ: ಸರಕಾರಿ ಪ್ರೌಢಶಾಲೆ ನಡ ಇದರ 2023-24ನೇ ಸಾಲಿನ ಪ್ರಥಮ ಪೋಷಕರ ಸಭೆಯನ್ನು ಜೂ.23 ರಂದು ನಡೆಸಲಾಯಿತು.

ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಸುಧಾಕರ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ವಿದ್ಯಾರ್ಥಿಗಳ ಕಲಿಕಾ ಪ್ರಗತಿಯ ಬಗ್ಗೆ ಹಾಗೂ ವಿಶೇಷವಾಗಿ ಶಾಲೆಯ ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಯಿತು.

ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಸಭೆಯಲ್ಲಿ ಆಂಗ್ಲ ಭಾಷಾ ಶಿಕ್ಷಕಿ ಶ್ರೀಮತಿ ಜಯಂತಿ ಸ್ಟ್ರೆಲ್ಲಾ ಸ್ವಾಗತ ಕೋರಿದರು. ಸಭೆಯಲ್ಲಿ ನಿಕಟ ಪೂರ್ವ ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಧರ್ಣೇಂದ್ರ ಜೈನ್ ಮಾತಾಡಿ ಪೋಷಕರು ಈ ಸಾಲಿನಲ್ಲಿ ಶಾಲೆಗೆ ಅಡಿಕೆ ತೋಟವನ್ನು ನಿರ್ಮಿಸುವ ಬೇಡಿಕೆಯನ್ನಿತ್ತರು. ಪ್ರಾಸ್ತಾವಿಕವಾಗಿ ಮಾತಾಡಿದ ಶಿಕ್ಷಕ ಶಿವಪುತ್ರ ಸುಣಗಾರ್ ಶಾಲೆಯು ನಡೆದು ಬಂದ ಹಾದಿಯ ಬಗ್ಗೆ ಬೆಳಕು ಚೆಲ್ಲಿದರು.

ಮುಖ್ಯಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ಇವರು ಮಕ್ಕಳ ಪ್ರಗತಿಯ ಬಗ್ಗೆ ಹಾಗೂ ಶಾಲಾಭಿವೃದ್ದಿ ಯೋಜನೆಯ ಬಗ್ಗೆ ಪೋಷಕರಿಗೆ ವಿವರಿಸಿದರು. ಚರ್ಚಾ ಸಮಯದಲ್ಲಿ ಭಾಗವಹಿಸಿದ ಪೋಷಕರು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ವೇದಿಕೆಯಲ್ಲಿ ಎಸ್.ಡಿ.ಎಂ.ಸಿ. ಸದಸ್ಯರುಗಳಾದ ಲಕ್ಷ್ಮಣ ನಾಯ್ಕ, ಆನಂದ ಶೆಟ್ಟಿ, ಶ್ರೀಮತಿ ಚೇತನಾ, ಶ್ರೀಮತಿ ಪ್ರೇಮ ಹೊಕ್ಕಿಲ, ಶ್ರೀಮತಿ ಪ್ರೇಮ ಕೆಳಗಿನ ಸುರ್ಯ ಉಪಸ್ಥಿತರಿದ್ದರು.

ಹಿಂದಿ ಶಿಕ್ಷಕ ಮೋಹನ ಬಾಬು ಧನ್ಯವಾದವಿತ್ತರು. ವಿಜ್ಞಾನ ಶಿಕ್ಷಕಿ ಶ್ರೀಮತಿ ಶೋಭಾ ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ನ್ಯಾಯವಾದಿ ಮೇಲೆ ದಾಳಿ: ಹಿಂದೂ ಜನಜಾಗೃತಿ ಸಮಿತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಪಟ್ರಮೆ ಗ್ರಾಮದಲ್ಲಿ ಎಂಟು ತಿಂಗಳ ಹಿಂದೆ ವಿಷ ಸೇವಿಸಿ ಸಾವನ್ನಪ್ಪಿದ ರಕ್ಷಿತಾ ಮತ್ತು ಲಾವಣ್ಯ: ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ, ದಲಿತ ಹಕ್ಕುಗಳ ಹೋರಾಟ ಸಮಿತಿಯಿಂದ ಪೊಲೀಸರಿಗೆ ಮನವಿ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ

Suddi Udaya

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

Suddi Udaya

ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya
error: Content is protected !!