25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

ಬೆಳ್ತಂಗಡಿ: ರೆಖ್ಯ ಗ್ರಾಮದ ಎಂಜಿರ-ಕಟ್ಟೆ ಅಂಗನವಾಡಿ ಕೇಂದ್ರದಿಂದ ಗರ್ಭೀಣಿಯರಿಗೆ ವಿತರಣೆಯಾಗಿದ್ದ ಮೊಟ್ಟೆಗಳು ಹಾಳಾಗಿದ್ದು ಇದರಿಂದ ಗ್ರಾಮಸ್ಥರ ಅಕ್ರೋಶ ವ್ಯಕ್ತಪಡಿಸಿದ ಬಗ್ಗೆ ವರದಿಯಾಗಿದೆ.

ಸರಕಾರದಿಂದ ಗರ್ಭಿಣಿಯರಿಗೆ ಅಂಗನವಾಡಿಯ ಮೂಲಕ ವಿತರಣೆಯಾಗುವ ಮೊಟ್ಟೆಗಳು ಎಲ್ಲಾ ಮನೆಗಳಿಗೂ ತಲುಪಿಸುವ ಕಾರ್ಯ ಕೈಗೊಳ್ಳಲಾಗಿತ್ತು. ಅಪೌಷ್ಟಿಕತೆ ನೀಗಿಸುವ ಸರ್ಕಾರದ ಉತ್ತಮ ಕಾರ್ಯದಿಂದ ಬೆಳೆಯುವ ಮಕ್ಕಳು ಪೌಷ್ಟಿಕವಾಗಿ ಬೆಳೆಯುತ್ತಾರೆ ಎನ್ನುವ ಉದ್ದೇಶದಿಂದ ವಿತರಣೆ ಹೊಣೆಯು ಅಂಗನವಾಡಿ ಕಾರ್ಯಕರ್ತೆಯರ ಮೇಲಿತ್ತು.

ಸರ್ಕಾರದಿಂದ ಸಿಗಬೇಕಿದ್ದ ಗುಣಮಟ್ಟದ ಮೊಟ್ಟೆ ಇಲ್ಲಿ ಕಳಪೆಯಾಗಿದ್ದು, ಬೇಯಿಸಿದಾಗ ಮೊಟ್ಟೆಯೊಳಗೆ ಹೆಪ್ಪುಗಟ್ಟಿದ ರಕ್ತ. ಅದಾಗಲೇ ಹೊರಬರಬೇಕಿದ್ದ ಮರಿ ಎಲ್ಲವೂ ಬೆಂದು ಹೋಗಿತ್ತು. ಸದ್ಯ ಈ ವಿಚಾರ ಇಡೀ ಗ್ರಾಮದಲ್ಲಿ ಸಂಚರಿಸಿದ್ದು, ಈ ಬಾರಿ ಮೊಟ್ಟೆ ಪಡೆದುಕೊಂಡಿದ್ದ ಪ್ರತೀ ಮನೆಯಲ್ಲೂ ಗುಣಮಟ್ಟ, ಸಂಬಂಧಪಟ್ಟವರ ನಿರ್ಲಕ್ಷ್ಯಕ್ಕೆ ಆಕ್ರೋಶ ಹೊರಬಿತ್ತು.

Related posts

ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೂರ್ಯ ವಂದನಾ ಭಜನಾ ಉತ್ಸವದ ಪೂರ್ವ ತಯಾರಿ ಸಭೆ

Suddi Udaya

ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹಕ್ಕೆ ಚಾಲನೆ:

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶಾರದೋತ್ಸವ ವಿಸರ್ಜನಾ ಕಾರ್ಯಕ್ರಮ

Suddi Udaya

ಅಳದಂಗಡಿ: ಕೆದ್ದು ನಿವಾಸಿ ಸತೀಶ್ ಪೂಜಾರಿ ನಿಧನ

Suddi Udaya

ಧರ್ಮಸ್ಥಳ: ಶ್ರೀ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ನಾವೂರು: ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!