ವೇಣೂರು ಕಾಲೇಜು ವಿದ್ಯಾರ್ಥಿನಿ ಅಸೌಖ್ಯದಿಂದ ನಿಧನ: ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ

Suddi Udaya

ವೇಣೂರು: ಬಜಿರೆ ಗ್ರಾಮದ ನೀರಪಲ್ಕೆ ಮನೆ ರವಿ ಕುಲಾಲ್ ರವರ ಪುತ್ರಿ ರಶ್ಮಿತಾ ರವರು ಅಸೌಖ್ಯದಿಂದ ಜೂ.24 ರಂದು ನಿಧನರಾದರು.

ಇವರು ವೇಣೂರು ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು.

ಕಳೆದ 4 ದಿವಸದ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಳೆದ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು.

ಮೃತರು ತಾಯಿ ಸುಶೀಲ, ಬಂಧುಬಳಗವನ್ನು ಅಗಲಿದ್ದಾರೆ.

Leave a Comment

error: Content is protected !!