23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

ಬೆಳ್ತಂಗಡಿ: ಇಲ್ಲಿನ ಪ್ರಸನ್ನ ಆಂಗ್ಲ ಮಾಧ್ಯಮ ವಸತಿ ಶಾಲೆ ಇದರ 2023-24ನೇ ಶೈಕ್ಷಣಿಕ ಸಾಲಿನ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಜೂ. 24ರಂದು ನೆರವೇರಿತು.

ದೀಪ ಪ್ರಜ್ವಲನ ಮಾಡಿದ ಪ್ರಸನ್ನ ಶಿಕ್ಷಕರ ಶಿಕ್ಷಣ ತರಬೇತಿ ಸಂಸ್ಥೆಯ ಉಪ ಪ್ರಾಂಶುಪಾಲರಾದ ಶ್ರೀನಿವಾಸ್, ಇವರು ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟದ ವಿಕಾಸಕ್ಕೆ ಸಂಘಗಳು ಪೂರಕವಾಗಿವೆ ಎಂದು ಅಭಿಪ್ರಾಯ ಪಟ್ಟರು. ಪ್ರಸ್ತಾವನೆಗೈದ ಪ್ರಸನ್ನ ಆಂಗ್ಲ ಮಾಧ್ಯಮ ಶಾಲಾ ಪ್ರಾಂಶುಪಾಲರಾದ ಕೆ. ಶಂಕರ್ ನಾರಾಯಣ್ ಭಟ್, ವಿದ್ಯಾರ್ಥಿಗಳ ಶೈಕ್ಷಣಿಕ ಒತ್ತಡವನ್ನು ನಿವಾರಿಸುವಲ್ಲಿ ಸಂಘಗಳು ಕಾರ್ಯಪ್ರವೃತ್ತರಾಗಲಿವೆ ಎಂದರು.

ಶಿಕ್ಷಕಿ ಭಾರತಿ. ಎನ್ ಸ್ವಾಗತಿಸಿದ ಸಭೆಗೆ, ವಿದ್ಯಾರ್ಥಿಗಳಾದ ಅಕ್ಷಾ ಶೆಟ್ಟಿ, ಆಯಿಷಾ, ಸಂಜ್ಞಾ, ನಹ್ಲಾ, ಐಸಿರಿ ಚೇತನ್, ಶಮ್ನಾ ಪ್ರಾರ್ಥಿಸಿ, ಶಿಕ್ಷಕಿ ಜೆರುಶಾ ಪ್ರತಿಜ್ಞಾ ವಿಧಿ ಬೋಧಿಸಿ, ಶಿಕ್ಷಕಿ ಮಿಲನಾ ಕೆ ಧನ್ಯವಾದವಿತ್ತು, ಶಿಕ್ಷಕ , ಅಶ್ವತ್ ಎನ್ ಸಂಘಗಳನ್ನು ರಚಿಸಿ, ಎಂ. ಕೆ ಕನ್ಯಾಡಿ ನಿರೂಪಿಸಿದರು.

ಶಿಕ್ಷಕರುಗಳಾದ ಪ್ರಭಾವತಿ, ಋತ್ವಿಕಾ, ಭಾರತಿ ಎನ್, ಪದ್ಮಲತಾ, ಮಿಲನಾ ಕೆ, ಅನುಪಮಾ, ರೂಪಶ್ರೀ, ಶಿವರಾಮ್ ಕೆ, ಅಶ್ವತ್ ಎನ್ ಸಂಘಗಳ ಯೋಜನೆ ಪ್ರಸ್ತಾಪಿಸಿದರು.

Related posts

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಹಿಂದೂ ಜನಜಾಗೃತಿ ಸಮಿತಿಯಿಂದ ಹಿಂದೂ ರಾಷ್ಟ್ರ ಸ್ಥಾಪನೆಗೆ ಕರೆ

Suddi Udaya

ಮರೋಡಿ: ಊರವರಿಂದ ಶ್ರಮದಾನ, ಕಳೆಗಿಡಗಂಟಿಗಳ ತೆರವು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಬೆಂಗಳೂರು ಭುವನೇಶ್ವರಿ ಕ್ಯಾಟರರ್ಸ್ ಜೆಬಿಆರ್ ಎಂಟರ್ ಪ್ರೈಶಸ್ ರವರಿಂದ ದೇವರಿಗೆ ವಿಶೇಷ ಹೂವಿನ ಅಲಂಕಾರ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ. ಮೈರೋಳ್ತಡ್ಕ, ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಶ್ರಮದಾನ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಜೇಮ್ಸ್ ಪಟ್ಟೇರಿಲ್ ರವರಿಗೆ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದಿಂದ ಗೌರವಾರ್ಪಣೆ

Suddi Udaya
error: Content is protected !!