23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು: ಫೆ.22 ರಿಂದ ಮಾರ್ಚ್ 1ರ ವರೆಗೆ ವೇಣೂರು ಬಾಹುಬಲಿಗೆ ಮಹಾಮಸ್ತಕಾಭಿಷೇಕ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಮಹಾಮಸ್ತಕಾಭಿಷೇಕದ ದಿನ ಘೋಷಣೆ

ವೇಣೂರು: ಶ್ರೀ ದಿಗಂಬರ ಜೈನ ತೀರ್ಥ ಕೇತ್ರ ಸಮಿತಿ ವೇಣೂರು ವತಿಯಿಂದ 2024 ರ ಫೆಬ್ರವರಿಯಲ್ಲಿ ನಡೆಯಲಿರುವ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭೀಷೇಕ ಕುರಿತು ಶ್ರಾವಕರ ಸಮಾಲೋಚನಾ ಸಭೆ ಜೂ.24 ರಂದು ವೇಣೂರು ಶ್ರೀ ಬಾಹುಬಲಿ ಸಭಾಭವನದಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮವನ್ನು‌ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಹಾಮಸ್ತಕಾಭಿಷೇಕದ ದಿನಾಂಕವನ್ನು ಘೋಷಣೆ ಮಾಡಿದರು.

2024 ರ ಫೆಬ್ರವರಿ 22 ರಿಂದ ಮಾರ್ಚ್ 1 ರ ತನಕ ವೇಣೂರು ಬಾಹುಬಲಿಗೆ ಮಹಾಮಜ್ಜನ ನಡೆಯಲಿದೆ. ಸಮಿತಿಯಲ್ಲಿ ಯುವಕರು ಹೆಚ್ಚಾಗಿ ಬರುಬೇಕು, 27 ಸಮಿತಿಗಳನ್ನು ರಚಿಸಲಾಗಿದ್ದು ಉತ್ತಮ ರೀತಿಯಲ್ಲಿ ಕಾರ್ಯಕ್ರಮ ಮೂಡಿಬರಲಿದೆ ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಹಕರಿಸಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿಗಳು, ಸಮಿತಿ ಅಧ್ಯಕ್ಷರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದರು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲರು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಅಭಯಚಂದ್ರ ಜೈನ್ , ಎಂ.ಕೆ.ವಿಜಯ ಕುಮಾರ್, ಸಮಿತಿಯ ಮುಖ್ಯಸ್ಥರಾದ ಪ್ರವೀಣ್ ಕುಮಾರ್ ಇಂದ್ರ, ಇನ್ನಿತರ ಗಣ್ಯರು , ಶ್ರಾವಕ, ಶ್ರಾವಕಿಯರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

Suddi Udaya

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ: ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಉತ್ತೀರ್ಣ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಬ್ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಅತ್ಯಾಧುನಿಕ ಸಿಎಲ್‌ಐಎ ಮೆಶಿನ್ ಅಳವಡಿಕೆ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಪಾಲ್ತಾಡಿ ರಾಮಕೃಷ್ಣ ಆಚಾರ್ಯ ರವರ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!