ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya

ಇಂದಬೆಟ್ಟು: ಇಂದಬೆಟ್ಟುವಿನ ಹೆಸರಾಂತ ಯುವ ಸಂಘಟನೆ ಶೈಕ್ಷಣಿಕ, ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಧಾರ್ಮಿಕ, ಕ್ರೀಡಾ ವಿಭಾಗದಲ್ಲಿ ಕಳೆದ 10 ವರ್ಷಗಳಿಂದ ಯುವಕರು ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜ ಸೇವೆ ಸಲ್ಲಿಸುತ್ತಿದ್ದು ಪ್ರತಿ ವರ್ಷದಂತೆ ಈ ಬಾರಿಯೂ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಜೂನ್ 25 ರಂದು ಸ್ವಚ್ಚತಾ ಶ್ರಮದಾನದ ಮಾಡಿದರು.

ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದು ಶ್ರಮದಾನಕ್ಕೆ ಸಹಕರಿಸಿದರು. ಆಟಿ ಅಮಾವಾಸ್ಯೆ ಪ್ರಯುಕ್ತ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನ ಇಂದಬೆಟ್ಟುವಿನಲ್ಲಿ ವಿಶೇಷ ತೀರ್ಥಸ್ನಾನ ನಡೆಯುತ್ತದೆ, ಊರ ಪರವೂರಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಆಗಮಿಸುವರು.

Leave a Comment

error: Content is protected !!