September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ ಪರಿಸರದಲ್ಲಿ ಚಿರತೆ ಓಡಾಟ, ಭಯಭೀತರಾದ ಗ್ರಾಮಸ್ಥರು: ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಅಳವಡಿಕೆ

ತೋಟತ್ತಾಡಿ:ಚಾರ್ಮಾಡಿ-ಕನಪಾಡಿ ಅರಣ್ಯ ಪ್ರದೇಶದ ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಮೂರ್ಜೆ, ನೆಲ್ಲಿಗುಡ್ಡೆ ಪರಿಸರದಲ್ಲಿ ಕಳೆದ ಒಂದು ವಾರದಿಂದ ಚಿರತೆ ಓಡಾಟ ಕಂಡು ಬಂದಿದೆ.ಇಲ್ಲಿನ ಪರಿಸರದ ಕೆಲವೊಂದು ಸಾಕು ನಾಯಿಗಳು ಕಣ್ಮರೆಯಾಗಿದ್ದು ಚಿರತೆಗೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ಎರಡು ದಿನಗಳ ಹಿಂದೆ ಸ್ಥಳೀಯರೊಬ್ಬರು ರಾತ್ರಿ ವೇಳೆ ಮನೆಯತ್ತ ತೆರಳುತ್ತಿದ್ದಾಗ ಮನೆಯಿಂದ ಅನತಿ ದೂರದಲ್ಲಿ ಚಿರತೆಯನ್ನು ಕಂಡಿದ್ದಾರೆ.

ಕಳೆದ ರಾತ್ರಿ ಮೂರ್ಜೆಯ ಮನೆಯೊಂದರ ಮಂದಿ ಸಂಬಂಧಿಕರ ಮನೆಗೆ ತೆರಳಿ ರಾತ್ರಿ 9ರ ವೇಳೆಗೆ ವಾಪಾಸ್ ಆಗುವಾಗ ಅವರ ಸಾಕು ನಾಯಿ ಕಣ್ಮರೆಯಾಗಿದೆ.2022ರ ಕ್ಯಾಮರಾ ಟ್ರಾಪಿಂಗ್ ವೇಳೆಯು ಈ ಪರಿಸರದಲ್ಲಿ ಎರಡು ಬಾರಿ ಚಿರತೆ ಕ್ಯಾಮರಾದಲ್ಲಿ ಸೆರೆಯಾಗಿತ್ತು.ಅರಣ್ಯ ಇಲಾಖೆಯ ಡಿ ಆರ್‌ ಎಫ್ ಒ ಭವಾನಿ ಶಂಕರ್, ಗಸ್ತು ಅರಣ್ಯ ಪಾಲಕ ಪಾಂಡುರಂಗ ಕಮತಿ ಪರಿಸರದಲ್ಲಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಇರಿಸಲಾಗಿದೆ.

Related posts

ಕೊಕ್ಕಡ ಡೇವಿಡ್ ಜೈಮಿ ಮನೆಗೆ ಎನ್.ಎಸ್.ಎಸ್ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024: ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

Suddi Udaya

ಗೇರುಕಟ್ಟೆ: ಪುಂಜಾಲಕಟ್ಟೆ ವಲಯ ಅಥ್ಲೆಟಿಕ್ ಕ್ರೀಡಾಕೂಟ

Suddi Udaya

ಮಡಂತ್ಯಾರಿನಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ ‘ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಬಿಲ್ಲವ ಸಂಘ ಬೇಹರಿನ್ ಅಧ್ಯಕ್ಷ ಹರೀಶ್ ಪೂಜಾರಿ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಚುನಾವಣಾ ಅರಿವು ಸ್ಪರ್ಧೆಗಳ ಉದ್ಘಾಟನೆ

Suddi Udaya
error: Content is protected !!