22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ ಪರಿಸರದಲ್ಲಿ ಚಿರತೆ ಓಡಾಟ, ಭಯಭೀತರಾದ ಗ್ರಾಮಸ್ಥರು: ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಅಳವಡಿಕೆ

ತೋಟತ್ತಾಡಿ:ಚಾರ್ಮಾಡಿ-ಕನಪಾಡಿ ಅರಣ್ಯ ಪ್ರದೇಶದ ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಮೂರ್ಜೆ, ನೆಲ್ಲಿಗುಡ್ಡೆ ಪರಿಸರದಲ್ಲಿ ಕಳೆದ ಒಂದು ವಾರದಿಂದ ಚಿರತೆ ಓಡಾಟ ಕಂಡು ಬಂದಿದೆ.ಇಲ್ಲಿನ ಪರಿಸರದ ಕೆಲವೊಂದು ಸಾಕು ನಾಯಿಗಳು ಕಣ್ಮರೆಯಾಗಿದ್ದು ಚಿರತೆಗೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ಎರಡು ದಿನಗಳ ಹಿಂದೆ ಸ್ಥಳೀಯರೊಬ್ಬರು ರಾತ್ರಿ ವೇಳೆ ಮನೆಯತ್ತ ತೆರಳುತ್ತಿದ್ದಾಗ ಮನೆಯಿಂದ ಅನತಿ ದೂರದಲ್ಲಿ ಚಿರತೆಯನ್ನು ಕಂಡಿದ್ದಾರೆ.

ಕಳೆದ ರಾತ್ರಿ ಮೂರ್ಜೆಯ ಮನೆಯೊಂದರ ಮಂದಿ ಸಂಬಂಧಿಕರ ಮನೆಗೆ ತೆರಳಿ ರಾತ್ರಿ 9ರ ವೇಳೆಗೆ ವಾಪಾಸ್ ಆಗುವಾಗ ಅವರ ಸಾಕು ನಾಯಿ ಕಣ್ಮರೆಯಾಗಿದೆ.2022ರ ಕ್ಯಾಮರಾ ಟ್ರಾಪಿಂಗ್ ವೇಳೆಯು ಈ ಪರಿಸರದಲ್ಲಿ ಎರಡು ಬಾರಿ ಚಿರತೆ ಕ್ಯಾಮರಾದಲ್ಲಿ ಸೆರೆಯಾಗಿತ್ತು.ಅರಣ್ಯ ಇಲಾಖೆಯ ಡಿ ಆರ್‌ ಎಫ್ ಒ ಭವಾನಿ ಶಂಕರ್, ಗಸ್ತು ಅರಣ್ಯ ಪಾಲಕ ಪಾಂಡುರಂಗ ಕಮತಿ ಪರಿಸರದಲ್ಲಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಇರಿಸಲಾಗಿದೆ.

Related posts

ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ: ಅಮೃತ ಮಹೋತ್ಸವಕ್ಕೆ ಲಕ್ಷ್ಮಿ ದೇವಧರ್ ಮತ್ತು ಮಕ್ಕಳು ಮೊಳಂಪಾಯ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಉಜಿರೆ ಯುವ ವಾಹಿನಿ ಸಂಚಲನಾ ಸಮಿತಿ ಮತ್ತು ಶ್ರೀ ಗುರುನಾರಾಯಣ ಸೇವಾ ಸಂಘದ ಆಶ್ರಯದಲ್ಲಿ ಗುರುಪೂಜೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಾರ್ಯ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿತೆ ಕಾರ್ಯಕ್ರಮ

Suddi Udaya

ಆರಂಬೋಡಿ ಗ್ರಾ.ಪಂ. ನ ಅಧ್ಯಕ್ಷರಾಗಿ ಪ್ರವೀಣಚಂದ್ರ ಜೈನ್ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ತೇಜಸ್ವಿನಿ

Suddi Udaya

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಗೆ ಹೆಚ್ಚುವರಿ ರೂ.50 ಲಕ್ಷ ಅನುದಾನ ಮಂಜೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!