April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ ಪರಿಸರದಲ್ಲಿ ಚಿರತೆ ಓಡಾಟ, ಭಯಭೀತರಾದ ಗ್ರಾಮಸ್ಥರು: ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಅಳವಡಿಕೆ

ತೋಟತ್ತಾಡಿ:ಚಾರ್ಮಾಡಿ-ಕನಪಾಡಿ ಅರಣ್ಯ ಪ್ರದೇಶದ ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಮೂರ್ಜೆ, ನೆಲ್ಲಿಗುಡ್ಡೆ ಪರಿಸರದಲ್ಲಿ ಕಳೆದ ಒಂದು ವಾರದಿಂದ ಚಿರತೆ ಓಡಾಟ ಕಂಡು ಬಂದಿದೆ.ಇಲ್ಲಿನ ಪರಿಸರದ ಕೆಲವೊಂದು ಸಾಕು ನಾಯಿಗಳು ಕಣ್ಮರೆಯಾಗಿದ್ದು ಚಿರತೆಗೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ಎರಡು ದಿನಗಳ ಹಿಂದೆ ಸ್ಥಳೀಯರೊಬ್ಬರು ರಾತ್ರಿ ವೇಳೆ ಮನೆಯತ್ತ ತೆರಳುತ್ತಿದ್ದಾಗ ಮನೆಯಿಂದ ಅನತಿ ದೂರದಲ್ಲಿ ಚಿರತೆಯನ್ನು ಕಂಡಿದ್ದಾರೆ.

ಕಳೆದ ರಾತ್ರಿ ಮೂರ್ಜೆಯ ಮನೆಯೊಂದರ ಮಂದಿ ಸಂಬಂಧಿಕರ ಮನೆಗೆ ತೆರಳಿ ರಾತ್ರಿ 9ರ ವೇಳೆಗೆ ವಾಪಾಸ್ ಆಗುವಾಗ ಅವರ ಸಾಕು ನಾಯಿ ಕಣ್ಮರೆಯಾಗಿದೆ.2022ರ ಕ್ಯಾಮರಾ ಟ್ರಾಪಿಂಗ್ ವೇಳೆಯು ಈ ಪರಿಸರದಲ್ಲಿ ಎರಡು ಬಾರಿ ಚಿರತೆ ಕ್ಯಾಮರಾದಲ್ಲಿ ಸೆರೆಯಾಗಿತ್ತು.ಅರಣ್ಯ ಇಲಾಖೆಯ ಡಿ ಆರ್‌ ಎಫ್ ಒ ಭವಾನಿ ಶಂಕರ್, ಗಸ್ತು ಅರಣ್ಯ ಪಾಲಕ ಪಾಂಡುರಂಗ ಕಮತಿ ಪರಿಸರದಲ್ಲಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಇರಿಸಲಾಗಿದೆ.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕ; ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಆಯ್ಕೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕೋಳಿ ಅಂಕ ಅಪರಾಧವಾಗಿದ್ದು ಕಾನೂನು ಪಾಲಿಸುವಂತೆ ಪೊಲೀಸರಿಗೆ ಡೈರೆಕ್ಟರ್ ಜನರಲ್ ಆದೇಶ

Suddi Udaya

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಮತ್ತು ದಿ.ಮಾಚಾರು ಗೋಪಾಲ ನಾಯ್ಕರ ಸಂಸ್ಮರಣೆ

Suddi Udaya

ಅಂಡೆತಡ್ಕ : ಕರಾಯ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಆರಂಬೋಡಿ: ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಅಂಗರಕರಿಯ ವತಿಯಿಂದ ಉಚಿತ ಸಾಮೂಹಿಕ ಮಕ್ಕಳ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya
error: Content is protected !!