September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ ಪರಿಸರದಲ್ಲಿ ಚಿರತೆ ಓಡಾಟ, ಭಯಭೀತರಾದ ಗ್ರಾಮಸ್ಥರು: ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಅಳವಡಿಕೆ

ತೋಟತ್ತಾಡಿ:ಚಾರ್ಮಾಡಿ-ಕನಪಾಡಿ ಅರಣ್ಯ ಪ್ರದೇಶದ ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಮೂರ್ಜೆ, ನೆಲ್ಲಿಗುಡ್ಡೆ ಪರಿಸರದಲ್ಲಿ ಕಳೆದ ಒಂದು ವಾರದಿಂದ ಚಿರತೆ ಓಡಾಟ ಕಂಡು ಬಂದಿದೆ.ಇಲ್ಲಿನ ಪರಿಸರದ ಕೆಲವೊಂದು ಸಾಕು ನಾಯಿಗಳು ಕಣ್ಮರೆಯಾಗಿದ್ದು ಚಿರತೆಗೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ಎರಡು ದಿನಗಳ ಹಿಂದೆ ಸ್ಥಳೀಯರೊಬ್ಬರು ರಾತ್ರಿ ವೇಳೆ ಮನೆಯತ್ತ ತೆರಳುತ್ತಿದ್ದಾಗ ಮನೆಯಿಂದ ಅನತಿ ದೂರದಲ್ಲಿ ಚಿರತೆಯನ್ನು ಕಂಡಿದ್ದಾರೆ.

ಕಳೆದ ರಾತ್ರಿ ಮೂರ್ಜೆಯ ಮನೆಯೊಂದರ ಮಂದಿ ಸಂಬಂಧಿಕರ ಮನೆಗೆ ತೆರಳಿ ರಾತ್ರಿ 9ರ ವೇಳೆಗೆ ವಾಪಾಸ್ ಆಗುವಾಗ ಅವರ ಸಾಕು ನಾಯಿ ಕಣ್ಮರೆಯಾಗಿದೆ.2022ರ ಕ್ಯಾಮರಾ ಟ್ರಾಪಿಂಗ್ ವೇಳೆಯು ಈ ಪರಿಸರದಲ್ಲಿ ಎರಡು ಬಾರಿ ಚಿರತೆ ಕ್ಯಾಮರಾದಲ್ಲಿ ಸೆರೆಯಾಗಿತ್ತು.ಅರಣ್ಯ ಇಲಾಖೆಯ ಡಿ ಆರ್‌ ಎಫ್ ಒ ಭವಾನಿ ಶಂಕರ್, ಗಸ್ತು ಅರಣ್ಯ ಪಾಲಕ ಪಾಂಡುರಂಗ ಕಮತಿ ಪರಿಸರದಲ್ಲಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಇರಿಸಲಾಗಿದೆ.

Related posts

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಣೆ

Suddi Udaya

ಕಾರು ಹಾಗೂ ಒಮಿನಿ ವಾಹನದಲ್ಲಿ ಬಂದ ತಂಡದಿಂದ ಜೀವ ಬೆದರಿಕೆ ಆರೋಪ: ಬೆಳ್ತಂಗಡಿ ಪೊಲೀಸರಿಗೆ ದೂರು

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಪ್ರಗತಿಪರ ಕೃಷಿಕ ಕಿರಣ್ ಕುಮಾರ್ ಮಂಜಿಲ ಆಯ್ಕೆ

Suddi Udaya

ಸಿರಿ ಸಂಸ್ಥೆಯ ಎಂ.ಡಿ. ಕೆ.ಎನ್ ಜನಾರ್ಧನರವರಿಗೆ ‘ಪ್ರತಿಷ್ಠಿತ ಮಹಾತ್ಮಗಾಂಧಿ ಸದ್ಭಾವನಾ ಅಂತಾರಾಷ್ಟ್ರೀಯ ಪ್ರಶಸ್ತಿ’: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಭಾರತೀಯ ಸೇನೆಯ ಅಗ್ನಿವೀರ್ ಹುದ್ದೆಗೆ ತೆಕ್ಕಾರಿನ ಗುರುಕಿರಣ್ ಆಯ್ಕೆ

Suddi Udaya
error: Content is protected !!