25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ ಪರಿಸರದಲ್ಲಿ ಚಿರತೆ ಓಡಾಟ, ಭಯಭೀತರಾದ ಗ್ರಾಮಸ್ಥರು: ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಅಳವಡಿಕೆ

ತೋಟತ್ತಾಡಿ:ಚಾರ್ಮಾಡಿ-ಕನಪಾಡಿ ಅರಣ್ಯ ಪ್ರದೇಶದ ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಮೂರ್ಜೆ, ನೆಲ್ಲಿಗುಡ್ಡೆ ಪರಿಸರದಲ್ಲಿ ಕಳೆದ ಒಂದು ವಾರದಿಂದ ಚಿರತೆ ಓಡಾಟ ಕಂಡು ಬಂದಿದೆ.ಇಲ್ಲಿನ ಪರಿಸರದ ಕೆಲವೊಂದು ಸಾಕು ನಾಯಿಗಳು ಕಣ್ಮರೆಯಾಗಿದ್ದು ಚಿರತೆಗೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ಎರಡು ದಿನಗಳ ಹಿಂದೆ ಸ್ಥಳೀಯರೊಬ್ಬರು ರಾತ್ರಿ ವೇಳೆ ಮನೆಯತ್ತ ತೆರಳುತ್ತಿದ್ದಾಗ ಮನೆಯಿಂದ ಅನತಿ ದೂರದಲ್ಲಿ ಚಿರತೆಯನ್ನು ಕಂಡಿದ್ದಾರೆ.

ಕಳೆದ ರಾತ್ರಿ ಮೂರ್ಜೆಯ ಮನೆಯೊಂದರ ಮಂದಿ ಸಂಬಂಧಿಕರ ಮನೆಗೆ ತೆರಳಿ ರಾತ್ರಿ 9ರ ವೇಳೆಗೆ ವಾಪಾಸ್ ಆಗುವಾಗ ಅವರ ಸಾಕು ನಾಯಿ ಕಣ್ಮರೆಯಾಗಿದೆ.2022ರ ಕ್ಯಾಮರಾ ಟ್ರಾಪಿಂಗ್ ವೇಳೆಯು ಈ ಪರಿಸರದಲ್ಲಿ ಎರಡು ಬಾರಿ ಚಿರತೆ ಕ್ಯಾಮರಾದಲ್ಲಿ ಸೆರೆಯಾಗಿತ್ತು.ಅರಣ್ಯ ಇಲಾಖೆಯ ಡಿ ಆರ್‌ ಎಫ್ ಒ ಭವಾನಿ ಶಂಕರ್, ಗಸ್ತು ಅರಣ್ಯ ಪಾಲಕ ಪಾಂಡುರಂಗ ಕಮತಿ ಪರಿಸರದಲ್ಲಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಇರಿಸಲಾಗಿದೆ.

Related posts

ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಹಾಲಿ ವ್ಯವಸ್ಥಪನಾ ಸಮಿತಿ ರದ್ದು ಹಿನ್ನಲೆ; ಹೊಸ ಹಣಕಾಸಿನ ವ್ಯವಹಾರ ನಡೆಸದಂತೆ ನ್ಯಾಯಾಲಯ ಆದೇಶ

Suddi Udaya

ಡಿ.21: ಸೋಮಂತ್ತಡ್ಕದಲ್ಲಿ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್ ಉದ್ಘಾಟನೆ, ಅದೃಷ್ಟ ಯೋಜನೆ ಪ್ರಾರಂಭ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ನೂತನ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ಪ್ರವೀಣ್ ರೈ, ಉಪಾಧ್ಯಕ್ಷರಾಗಿ ಶಿವರಾಮ ಅವಿರೋಧವಾಗಿ ಆಯ್ಕೆ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya
error: Content is protected !!