July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ ಪರಿಸರದಲ್ಲಿ ಚಿರತೆ ಓಡಾಟ, ಭಯಭೀತರಾದ ಗ್ರಾಮಸ್ಥರು: ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಅಳವಡಿಕೆ

ತೋಟತ್ತಾಡಿ:ಚಾರ್ಮಾಡಿ-ಕನಪಾಡಿ ಅರಣ್ಯ ಪ್ರದೇಶದ ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಮೂರ್ಜೆ, ನೆಲ್ಲಿಗುಡ್ಡೆ ಪರಿಸರದಲ್ಲಿ ಕಳೆದ ಒಂದು ವಾರದಿಂದ ಚಿರತೆ ಓಡಾಟ ಕಂಡು ಬಂದಿದೆ.ಇಲ್ಲಿನ ಪರಿಸರದ ಕೆಲವೊಂದು ಸಾಕು ನಾಯಿಗಳು ಕಣ್ಮರೆಯಾಗಿದ್ದು ಚಿರತೆಗೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ಎರಡು ದಿನಗಳ ಹಿಂದೆ ಸ್ಥಳೀಯರೊಬ್ಬರು ರಾತ್ರಿ ವೇಳೆ ಮನೆಯತ್ತ ತೆರಳುತ್ತಿದ್ದಾಗ ಮನೆಯಿಂದ ಅನತಿ ದೂರದಲ್ಲಿ ಚಿರತೆಯನ್ನು ಕಂಡಿದ್ದಾರೆ.

ಕಳೆದ ರಾತ್ರಿ ಮೂರ್ಜೆಯ ಮನೆಯೊಂದರ ಮಂದಿ ಸಂಬಂಧಿಕರ ಮನೆಗೆ ತೆರಳಿ ರಾತ್ರಿ 9ರ ವೇಳೆಗೆ ವಾಪಾಸ್ ಆಗುವಾಗ ಅವರ ಸಾಕು ನಾಯಿ ಕಣ್ಮರೆಯಾಗಿದೆ.2022ರ ಕ್ಯಾಮರಾ ಟ್ರಾಪಿಂಗ್ ವೇಳೆಯು ಈ ಪರಿಸರದಲ್ಲಿ ಎರಡು ಬಾರಿ ಚಿರತೆ ಕ್ಯಾಮರಾದಲ್ಲಿ ಸೆರೆಯಾಗಿತ್ತು.ಅರಣ್ಯ ಇಲಾಖೆಯ ಡಿ ಆರ್‌ ಎಫ್ ಒ ಭವಾನಿ ಶಂಕರ್, ಗಸ್ತು ಅರಣ್ಯ ಪಾಲಕ ಪಾಂಡುರಂಗ ಕಮತಿ ಪರಿಸರದಲ್ಲಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಇರಿಸಲಾಗಿದೆ.

Related posts

ಬೆಳ್ತಂಗಡಿಯ 5 ಮಂದಿ ಕೃಷಿಕರಿಗೆ ಅತ್ಯುತ್ತಮ ಸಾವಯವ ಪ್ರೋತ್ಸಾಹ ರೈತ ಪ್ರಶಸ್ತಿ

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ಕಚೇರಿಯ ವಿಜಯ ರೈ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಕಿರು ಧೀಕ್ಷೆ ಸ್ವೀಕಾರ

Suddi Udaya

ವಿದ್ಯಾಮಾತಾದ ಮುಕುಟಕ್ಕೆ ಮತ್ತೊಂದು ಗರಿಮೆ: SSC-GD(ಸಶಸ್ತ್ರ ಪಡೆ) ಲಿಖಿತ ಪರೀಕ್ಷೆ ಉತ್ತೀರ್ಣಗೊಂಡ ಇಂಜಿನಿಯರಿಂಗ್ ವಿದ್ಯಾರ್ಥಿನಿ ಲಹರಿ ಕೆ.

Suddi Udaya

ಯಕ್ಷಭಾರತಿ ಸಂಸ್ಥೆಯ ವತಿಯಿಂದ ಕೋಳ್ಯೂರು ರಾಮಚಂದ್ರ ರಾವ್ ರವರಿಗೆ ಸನ್ಮಾನ

Suddi Udaya
error: Content is protected !!