September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ ಪರಿಸರದಲ್ಲಿ ಚಿರತೆ ಓಡಾಟ, ಭಯಭೀತರಾದ ಗ್ರಾಮಸ್ಥರು: ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಅಳವಡಿಕೆ

ತೋಟತ್ತಾಡಿ:ಚಾರ್ಮಾಡಿ-ಕನಪಾಡಿ ಅರಣ್ಯ ಪ್ರದೇಶದ ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಮೂರ್ಜೆ, ನೆಲ್ಲಿಗುಡ್ಡೆ ಪರಿಸರದಲ್ಲಿ ಕಳೆದ ಒಂದು ವಾರದಿಂದ ಚಿರತೆ ಓಡಾಟ ಕಂಡು ಬಂದಿದೆ.ಇಲ್ಲಿನ ಪರಿಸರದ ಕೆಲವೊಂದು ಸಾಕು ನಾಯಿಗಳು ಕಣ್ಮರೆಯಾಗಿದ್ದು ಚಿರತೆಗೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ಎರಡು ದಿನಗಳ ಹಿಂದೆ ಸ್ಥಳೀಯರೊಬ್ಬರು ರಾತ್ರಿ ವೇಳೆ ಮನೆಯತ್ತ ತೆರಳುತ್ತಿದ್ದಾಗ ಮನೆಯಿಂದ ಅನತಿ ದೂರದಲ್ಲಿ ಚಿರತೆಯನ್ನು ಕಂಡಿದ್ದಾರೆ.

ಕಳೆದ ರಾತ್ರಿ ಮೂರ್ಜೆಯ ಮನೆಯೊಂದರ ಮಂದಿ ಸಂಬಂಧಿಕರ ಮನೆಗೆ ತೆರಳಿ ರಾತ್ರಿ 9ರ ವೇಳೆಗೆ ವಾಪಾಸ್ ಆಗುವಾಗ ಅವರ ಸಾಕು ನಾಯಿ ಕಣ್ಮರೆಯಾಗಿದೆ.2022ರ ಕ್ಯಾಮರಾ ಟ್ರಾಪಿಂಗ್ ವೇಳೆಯು ಈ ಪರಿಸರದಲ್ಲಿ ಎರಡು ಬಾರಿ ಚಿರತೆ ಕ್ಯಾಮರಾದಲ್ಲಿ ಸೆರೆಯಾಗಿತ್ತು.ಅರಣ್ಯ ಇಲಾಖೆಯ ಡಿ ಆರ್‌ ಎಫ್ ಒ ಭವಾನಿ ಶಂಕರ್, ಗಸ್ತು ಅರಣ್ಯ ಪಾಲಕ ಪಾಂಡುರಂಗ ಕಮತಿ ಪರಿಸರದಲ್ಲಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಇರಿಸಲಾಗಿದೆ.

Related posts

ಬೆಳ್ತಂಗಡಿ: ಮಿಷ್ ಮಷ್ ಫ್ಯಾನ್ಸಿಯಲ್ಲಿ ಲಕ್ಕಿ ಡ್ರಾ: ರೂ.499 ರ ಹೆಚ್ಚಿನ ಖರೀದಿಗೆ ಲಕ್ಕಿ ಕೂಪನ್

Suddi Udaya

ಸಾಧನೆಯ ಶಿಖರದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಶಿಕ್ಷಣ ಕ್ಷೇತ್ರದಲ್ಲೇ ಹೊಸ ಭಾಷ್ಯ , ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಸಂಸ್ಥೆ

Suddi Udaya

ಉಜಿರೆ: ಸಿದ್ದವನ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಶ್ರೀ ಶಾರದಾ ಪೂಜೆ

Suddi Udaya

ಮೇಲಂತಬೆಟ್ಟು : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಇಮ್ತಿಯಾಜ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!