25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ ಪರಿಸರದಲ್ಲಿ ಚಿರತೆ ಓಡಾಟ, ಭಯಭೀತರಾದ ಗ್ರಾಮಸ್ಥರು: ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಅಳವಡಿಕೆ

ತೋಟತ್ತಾಡಿ:ಚಾರ್ಮಾಡಿ-ಕನಪಾಡಿ ಅರಣ್ಯ ಪ್ರದೇಶದ ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಮೂರ್ಜೆ, ನೆಲ್ಲಿಗುಡ್ಡೆ ಪರಿಸರದಲ್ಲಿ ಕಳೆದ ಒಂದು ವಾರದಿಂದ ಚಿರತೆ ಓಡಾಟ ಕಂಡು ಬಂದಿದೆ.ಇಲ್ಲಿನ ಪರಿಸರದ ಕೆಲವೊಂದು ಸಾಕು ನಾಯಿಗಳು ಕಣ್ಮರೆಯಾಗಿದ್ದು ಚಿರತೆಗೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ಎರಡು ದಿನಗಳ ಹಿಂದೆ ಸ್ಥಳೀಯರೊಬ್ಬರು ರಾತ್ರಿ ವೇಳೆ ಮನೆಯತ್ತ ತೆರಳುತ್ತಿದ್ದಾಗ ಮನೆಯಿಂದ ಅನತಿ ದೂರದಲ್ಲಿ ಚಿರತೆಯನ್ನು ಕಂಡಿದ್ದಾರೆ.

ಕಳೆದ ರಾತ್ರಿ ಮೂರ್ಜೆಯ ಮನೆಯೊಂದರ ಮಂದಿ ಸಂಬಂಧಿಕರ ಮನೆಗೆ ತೆರಳಿ ರಾತ್ರಿ 9ರ ವೇಳೆಗೆ ವಾಪಾಸ್ ಆಗುವಾಗ ಅವರ ಸಾಕು ನಾಯಿ ಕಣ್ಮರೆಯಾಗಿದೆ.2022ರ ಕ್ಯಾಮರಾ ಟ್ರಾಪಿಂಗ್ ವೇಳೆಯು ಈ ಪರಿಸರದಲ್ಲಿ ಎರಡು ಬಾರಿ ಚಿರತೆ ಕ್ಯಾಮರಾದಲ್ಲಿ ಸೆರೆಯಾಗಿತ್ತು.ಅರಣ್ಯ ಇಲಾಖೆಯ ಡಿ ಆರ್‌ ಎಫ್ ಒ ಭವಾನಿ ಶಂಕರ್, ಗಸ್ತು ಅರಣ್ಯ ಪಾಲಕ ಪಾಂಡುರಂಗ ಕಮತಿ ಪರಿಸರದಲ್ಲಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಇರಿಸಲಾಗಿದೆ.

Related posts

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ ಸ್ಥಾನ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮ

Suddi Udaya

ಕಳೆಂಜ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ನ.30: ಬಜಿರೆ ಹೊಸಪಟ್ಣ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಆಶ್ರಯದಲ್ಲಿ ಹೊನಲು ಬೆಳಕಿನ ಪುರುಷರ 60 ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya
error: Content is protected !!