July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

ಬಂದಾರು : ಕ್ರೀಡಾ ಸಾಧನೆಯಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಬಂದಾರು ಸರಕಾರಿ ಉನ್ನತೀಕೃತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಳೆಗಾಲದ ಹಿನ್ನೆಲೆಯಲ್ಲಿ ಶಾಲೆಯ ವಿವಿಧ ಅಗತ್ಯ ಕೆಲಸಗಳನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪೋಷಕರು,
ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಸದಸ್ಯರು ಜೂ.26 ರಂದು ಶ್ರಮದಾನದ ಮೂಲಕ ನಡೆಸಿಕೊಟ್ಟರು.

ಶ್ರಮದಾನದಲ್ಲಿ ಶಾಲಾ ಆವರಣದ ಬೇಲಿ ದುರಸ್ತಿ, ಆಟದ ಮೈದಾನದ ಸುತ್ತಲಿನ ಚರಂಡಿ ನಿರ್ವಹಣೆ, ಶಾಲೆಯ ಅಡಿಕೆ ಗಿಡದ ತೋಟಕ್ಕೆ ಸೊಪ್ಪು ಹಾಕುವುದು ಮತ್ತಿತರ ಕೆಲಸಗಳನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಉಮೇಶ್ ಗೌಡ ಪೊಯ್ಯೋಲೆ ಅವರು ಮಾತನಾಡಿ ಎಲ್ಲಾ ಪೋಷಕರು ಉತ್ಸಾಹದಿಂದ ಕೆಲಸದಲ್ಲಿ ಪಾಲ್ಗೊಂಡು ಶ್ರಮದಾನವನ್ನು ಯಶಸ್ವಿಗೊಳಿಸುವಂತೆ ವಿನಂತಿಸಿಕೊಂಡು ಕೃತಜ್ಞತೆ ಸಲ್ಲಿಸಿದರು.
ಶ್ರಮದಾನದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಮಂಜನಾಯ್ಕ ಸಿ. ಮತ್ತು ಶಿಕ್ಷಕ ವೃಂದ ಭಾಗಿಯಾದರು.

Related posts

ಕಲ್ಮಂಜ ಶಾಲಾ ಶತ ಸಂಭ್ರಮಕ್ಕೆ ಮುಖ್ಯಮಂತ್ರಿಗಳಿಂದ ಶುಭಹಾರೈಕೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 139ರ ಅಧ್ಯಕ್ಷರಾಗಿ ಚಂದ್ರಶೇಖರ, ಕಾರ್ಯದರ್ಶಿಯಾಗಿ ರಮಾನಾಥ ಪೂಜಾರಿ ಆಯ್ಕೆ

Suddi Udaya

ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya

ಉಜಿರೆ ಪೆರ್ಲ ಪ್ರಹ್ಲಾದ ನಗರದಿಂದ ಕಾಣೆಯಾದ ಪಿ.ಕೆ ಕೃಷ್ಣಪ್ಪರ ಪತ್ತೆಗೆ ಪೊಲೀಸರ ಮನವಿ

Suddi Udaya
error: Content is protected !!