July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

ನಿಡ್ಲೆ: ಸರ್ಕಾರಿ ಪ್ರೌಢಶಾಲೆ ನಿಡ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ನಾಟ್ಯ ತರಬೇತಿಯು ಜೂನ್ 26ರಂದು ಉದ್ಘಾಟನೆಗೊಂಡಿತು.

ನಿಡ್ಲೆ ಗ್ರಾಮ ಪಂಚಾಯತ್ ನ ಅಧ್ಯಕ್ಷ ಪ್ರವೀಣ್ ಹೆಬ್ಬಾರ್ ದೀಪ ಬೆಳಗಿಸುವುದರೊಂದಿಗೆ ಉದ್ಘಾಟನೆಯನ್ನು ನೆರವೇರಿಸಿ ಶುಭ ಹಾರೈಸಿದರು.

ನಾಟ್ಯ ತರಬೇತಿ ಗುರುಗಳಾಗಿ ಧರ್ಮಸ್ಥಳ ಮೇಳದಲ್ಲಿ ಅನೇಕ ವರ್ಷಗಳ ಕಾಲ ಕಲಾವಿದನಾಗಿ ಸೇವೆಗೈದ ಈಶ್ವರ ಪ್ರಸಾದ್ ಸಹಕರಿಸಲಿದ್ದು ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಶಿಕ್ಷಣದೊಂದಿಗೆ ಕಲೆಯ ಆಸಕ್ತಿಯೂ ವಿದ್ಯಾರ್ಥಿಗಳಲ್ಲಿ ಬೆಳೆಯಲಿ ಎಂದು ಹಾರೈಸಿದರು.

ಮುಖ್ಯ ಶಿಕ್ಷಕರಾದ ಶ್ರೀಮತಿ ಶಾಂತ ಶೆಟ್ಟಿ ಉಪಸ್ಥಿತರಿದ್ದರು. ಶಿಕ್ಷಕರಾದ ಶರತ್ ತುಳುಪುಳೆ ಇವರು ಯಕ್ಷ ಶೈಲಿಯಲ್ಲಿ ಪ್ರಾರ್ಥಿಸಿ, ಶ್ರೀಮತಿ ಶೋಲಿ ಇವರು ಸ್ವಾಗತಿಸಿ, ಶ್ರೀಮತಿ ಸುಚಿತ್ರ ರವರು ವಂದಿಸಿದ ಈ ಕಾರ್ಯಕ್ರಮವನ್ನು ವಿನಾಯಕ ಜೋಶಿ ನಿರ್ವಹಿಸಿದರು.

Related posts

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya

ನಿಡ್ಲೆಯಲ್ಲಿ ಸಂಪನ್ನಗೊಂಡ 34ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಪತ್ತೆಯಾದ ಬಂದೂಕು ಪ್ರಕರಣ ಮಧ್ಯಂತರ ತಡೆ ಮುಂದೂಡಿದ ಹೈಕೋರ್ಟ್

Suddi Udaya

ನಾವೂರು: ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ

Suddi Udaya

ಅಪಾಯಕಾರಿ ಕಿನ್ನಿಗೋಳಿ – ಪಡಂಗಡಿ ರಸ್ತೆ : ಚರಂಡಿ ವ್ಯವಸ್ಥೆ ನಿರ್ಮಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!