30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಗ್ರಾಮ ಸಭೆ: ಅಂಗಡಿ ಬಾಡಿಗೆ ಬಾಕಿದಾರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯ

ಅಳದಂಗಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ಅವರು ಗ್ರಾಮಸಭೆಯನ್ನು ಮುನ್ನಡೆಸಿದರು

ಪಂಚಾಯತ್ ನ ಅಂಗಡಿ ಬಾಡಿಗೆ ಸುಮಾರು 10 ಲಕ್ಷ ಬಾಕಿಯಿದ್ದು ಬಾಡಿಗೆದಾರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದರು. ಹಾಗೂ ಗ್ರಾಮೀಣ ಭಾಗದ ಅಭಿವೃದ್ಧಿಯ ದೃಷ್ಟಿಯಿಂದ ಹಲವಾರು ಚರ್ಚೆಗಳು ನಡೆದವು.

ಗ್ರಾಮಸಭೆಯಲ್ಲಿ ಪಂಚಾಯತದ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ಪಂಚಾಯತ್ ಉಪಾಧ್ಯಕ್ಷ ಹರೀಶ್ ಆಚಾರ್ಯ,ಸದಸ್ಯರರಾದ ಕೃಷ್ಣಪ್ಪ ಬಿಕ್ಕಿರ, ರವಿ ಪೂಜಾರಿ, ಗೀತಾ,ಪ್ರಶಾಂತ್ ವೇಗಸ್, ಅಬ್ದುಲ್ ಖಾದರ್,ಲಲಿತಾ,ರೂಪಾಶ್ರೀ, ಶಾಲಿನಿ, ಸರಸ್ವತಿ, ಪ್ರವೀಣ ಹಾಗೂ ದ್ವೀತಿಯ ದರ್ಜೆ ಲೆಕ್ಕ ಸಹಾಯಕ ಪೂವಪ್ಪ ಮಲೆಕುಡಿಯ ಮತ್ತು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಎಲ್.ಹೆಚ್. ಮಂಜುನಾಥ್

Suddi Udaya

ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

Suddi Udaya

ಮಾಲಾಡಿ: ಕೊಲ್ಪೆದಬೈಲ್ ಉಮೇಶ್ ಶೆಟ್ಟಿಯವರ ಮನೆಯಲ್ಲಿ ಪ್ರೇತ ಬಾಧೆ: ಬೆಂಕಿ ಹಿಡಿದು ಉರಿಯುವ ಬಟ್ಟೆ-ನೆಲಕ್ಕೆ ಬೀಳುತ್ತಿರುವ ಪಾತ್ರೆ ಬಟ್ಟಲು; ಮನೆಯವರಲ್ಲಿ ಆತಂಕ ಸೃಷ್ಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

Suddi Udaya
error: Content is protected !!