30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಗ್ರಾಮ ಸಭೆ: ಅಂಗಡಿ ಬಾಡಿಗೆ ಬಾಕಿದಾರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯ

ಅಳದಂಗಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ಅವರು ಗ್ರಾಮಸಭೆಯನ್ನು ಮುನ್ನಡೆಸಿದರು

ಪಂಚಾಯತ್ ನ ಅಂಗಡಿ ಬಾಡಿಗೆ ಸುಮಾರು 10 ಲಕ್ಷ ಬಾಕಿಯಿದ್ದು ಬಾಡಿಗೆದಾರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದರು. ಹಾಗೂ ಗ್ರಾಮೀಣ ಭಾಗದ ಅಭಿವೃದ್ಧಿಯ ದೃಷ್ಟಿಯಿಂದ ಹಲವಾರು ಚರ್ಚೆಗಳು ನಡೆದವು.

ಗ್ರಾಮಸಭೆಯಲ್ಲಿ ಪಂಚಾಯತದ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ಪಂಚಾಯತ್ ಉಪಾಧ್ಯಕ್ಷ ಹರೀಶ್ ಆಚಾರ್ಯ,ಸದಸ್ಯರರಾದ ಕೃಷ್ಣಪ್ಪ ಬಿಕ್ಕಿರ, ರವಿ ಪೂಜಾರಿ, ಗೀತಾ,ಪ್ರಶಾಂತ್ ವೇಗಸ್, ಅಬ್ದುಲ್ ಖಾದರ್,ಲಲಿತಾ,ರೂಪಾಶ್ರೀ, ಶಾಲಿನಿ, ಸರಸ್ವತಿ, ಪ್ರವೀಣ ಹಾಗೂ ದ್ವೀತಿಯ ದರ್ಜೆ ಲೆಕ್ಕ ಸಹಾಯಕ ಪೂವಪ್ಪ ಮಲೆಕುಡಿಯ ಮತ್ತು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ರಥ ಸಮರ್ಪಣೆ: ಹಲೇಜಿ-ತನ್ನೋಜಿ  ಶ್ರೀ ಕ್ಷೇತ್ರದಲ್ಲಿ  ಶೋಭಾಯಾತ್ರೆಗೆ ಚಾಲನೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 24 ಅಭ್ಯರ್ಥಿಗಳ ಚಿಹ್ನೆ

Suddi Udaya

ನಿಡ್ಲೆ ಹಾಗೂ ಬೂಡುಜಾಲುವಿನಲ್ಲಿ ಸೌಜನ್ಯಪರ ಹಾಕಿದ ಬ್ಯಾನರ್ ನ್ನು ಕಿತ್ತೆಸೆದ ಕಿಡಿಗೇಡಿಗಳು

Suddi Udaya

ಉಜಿರೆ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ “ ದೀಕ್ಷಾ ಸಂಸ್ಕಾರ” ಸಮಾರಂಭ

Suddi Udaya

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹೂದ್ದೂರ್ ಶಾಸ್ತ್ರೀಯ ಜನ್ಮ ದಿನ ಆಚರಣೆ

Suddi Udaya

ಎಸ್.ಡಿ.ಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ “ಮಾಮ್” ಪ್ರಶಸ್ತಿಯ ಗರಿ

Suddi Udaya
error: Content is protected !!