30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

ಬೆಳ್ತಂಗಡಿ : ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಬೆಳ್ತಂಗಡಿ ಮೂರು ಮಾರ್ಗದ ಬಳಿಯಿಂದ ಅಂಬೇಡ್ಕರ್ ಭವನದವರೆಗೆ ಔಷಧಿ ವ್ಯಾಪಾರಿಗಳ ಜಾಥವು ಜೂ.26 ರಂದು ನಡೆಯಿತು.

ನಂತರ ಅಂಬೇಡ್ಕರ್ ಭವನದಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಡಾ.ಆಂಟೋನಿ ಟಿ.ಪಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಮಂಗಳೂರು ಉಪ ಔಷಧ ನಿಯಂತ್ರಕ ಸುಜಿತ್ ಟಿ.ಪಿ, ಸಹಾಯಕ ಔಷಧ ನಿಯಂತ್ರಕರಾದ ಉದಯ ಕಿಶೋರ್, ಬಾಬು ಬಿ.ಎನ್, ಉಪಾಧ್ಯಕ್ಷ ಉದಯ್ ಕುಮಾರ್ ಮಡಂತ್ಯಾರು ಮಹಾವೀರ ಮೆಡಿಕಲ್, ಕಾರ್ಯದರ್ಶಿ ಮಾಧವ ಬೆಳ್ತಂಗಡಿ ಗಣೇಶ್ ಮೆಡಿಕಲ್, ಕೋಶಾಧಿಕಾರಿ ಗಣಪತಿ ಭಟ್ ಅಮರ್ ಡ್ರಗ್ ಹೌಸ್ ಬೆಳ್ತಂಗಡಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಪದಾಧಿಕಾರಿಗಳು, ಔಷಧಿ ವ್ಯಾಪಾರಸ್ಥರು, ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಅಶ್ವಿನಿ ಪ್ರಾರ್ಥಿಸಿದರು. ಸುಜಿತ್ ಭಿಡೆ ಸ್ವಾಗತಿಸಿ, ಪ್ರಕಾಶ್ ನಿರೂಪಿಸಿದರು.

Related posts

ಸುದ್ದಿ ಉದಯ ದೀಪಾವಳಿ ವಿಶೇಷಾಂಕ- 2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಬೆಳ್ತಂಗಡಿ ಗ್ರಾಮೀಣ ಮತ್ತು ನಗರ ಕಾಂಗ್ರೆಸ್ ಎಸ್ ಸಿ ಘಟಕದ ನೂತನ ಅಧ್ಯಕ್ಷರ ಮತ್ತು ಜಿಲ್ಲಾ ಉಪಾಧ್ಯಕ್ಷರ ನೇಮಕ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕ ನಂದಕುಮಾರ್ ಅವರಿಗೆ ಸಂತಾಪ ಸೂಚಕ ಸಭೆ

Suddi Udaya

ಗುರುವಾಯನಕೆರೆ: ನಿಲ್ಲಿಸಿದ್ದ ಮೋಟಾರ್‌ ಸೈಕಲ್‌ ಕಳವು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya

ಬಂದಾರು ಗ್ರಾ.ಪಂ. ಜಮಾಬಂದಿ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಯುವ ಸಾಹಿತಿ ಚಂದ್ರಹಾಸ ಕುಂಬಾರ ಹಾಗೂ ರಾಜ್ಯ ಮಟ್ಟದ ವೆಟ್ ಲಿಫ್ಟಿಂಗ್ ನಲ್ಲಿ ಅವಳಿ ಚಿನ್ನದ ಪದಕ ವಿಜೇತೆ ಕು. ತೇಜಶ್ವಿನಿ ಪೂಜಾರಿ ರವರಿಗೆ ಸನ್ಮಾನ

Suddi Udaya
error: Content is protected !!