23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

ಬೆಳ್ತಂಗಡಿ : ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಬೆಳ್ತಂಗಡಿ ಮೂರು ಮಾರ್ಗದ ಬಳಿಯಿಂದ ಅಂಬೇಡ್ಕರ್ ಭವನದವರೆಗೆ ಔಷಧಿ ವ್ಯಾಪಾರಿಗಳ ಜಾಥವು ಜೂ.26 ರಂದು ನಡೆಯಿತು.

ನಂತರ ಅಂಬೇಡ್ಕರ್ ಭವನದಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಡಾ.ಆಂಟೋನಿ ಟಿ.ಪಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಮಂಗಳೂರು ಉಪ ಔಷಧ ನಿಯಂತ್ರಕ ಸುಜಿತ್ ಟಿ.ಪಿ, ಸಹಾಯಕ ಔಷಧ ನಿಯಂತ್ರಕರಾದ ಉದಯ ಕಿಶೋರ್, ಬಾಬು ಬಿ.ಎನ್, ಉಪಾಧ್ಯಕ್ಷ ಉದಯ್ ಕುಮಾರ್ ಮಡಂತ್ಯಾರು ಮಹಾವೀರ ಮೆಡಿಕಲ್, ಕಾರ್ಯದರ್ಶಿ ಮಾಧವ ಬೆಳ್ತಂಗಡಿ ಗಣೇಶ್ ಮೆಡಿಕಲ್, ಕೋಶಾಧಿಕಾರಿ ಗಣಪತಿ ಭಟ್ ಅಮರ್ ಡ್ರಗ್ ಹೌಸ್ ಬೆಳ್ತಂಗಡಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಪದಾಧಿಕಾರಿಗಳು, ಔಷಧಿ ವ್ಯಾಪಾರಸ್ಥರು, ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಅಶ್ವಿನಿ ಪ್ರಾರ್ಥಿಸಿದರು. ಸುಜಿತ್ ಭಿಡೆ ಸ್ವಾಗತಿಸಿ, ಪ್ರಕಾಶ್ ನಿರೂಪಿಸಿದರು.

Related posts

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶ್ರೀ ಧ.ಮ. ಆಂ.ಮಾ. ಶಾಲೆ ಧರ್ಮಸ್ಥಳದ ಜಂಟಿ ಆಶ್ರಯದಲ್ಲಿ ಸ್ಕೌಟ್ಸ್ ಗೈಡ್ಸ್ ಕಬ್ ಬುಲ್ ಬುಲ್ ಪೂರ್ವ ಸಿದ್ಧತಾ ಪರೀಕ್ಷಾ ಶಿಬಿರ

Suddi Udaya

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

Suddi Udaya

ಸಚಿವ ದಿನೇಶ್ ಗುಂಡೂರಾವ್‌ರಿಂದ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಬರ್ಬರ ಕೊಲೆ ಪ್ರಕರಣ: ಸ್ಥಳಕ್ಕೆ ಎಸ್ಪಿ ಸೇರಿದಂತೆ ವಿವಿಧ ತಂಡದಿಂದ ತನಿಖೆ

Suddi Udaya

ಶಿಶಿಲ: ಸುಕನ್ಯಾ ಹೃದಯಾಘಾತದಿಂದ ನಿಧನ

Suddi Udaya
error: Content is protected !!