23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

ನಿಡ್ಲೆ: ಸರ್ಕಾರಿ ಪ್ರೌಢಶಾಲೆ ನಿಡ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ನಾಟ್ಯ ತರಬೇತಿಯು ಜೂನ್ 26ರಂದು ಉದ್ಘಾಟನೆಗೊಂಡಿತು.

ನಿಡ್ಲೆ ಗ್ರಾಮ ಪಂಚಾಯತ್ ನ ಅಧ್ಯಕ್ಷ ಪ್ರವೀಣ್ ಹೆಬ್ಬಾರ್ ದೀಪ ಬೆಳಗಿಸುವುದರೊಂದಿಗೆ ಉದ್ಘಾಟನೆಯನ್ನು ನೆರವೇರಿಸಿ ಶುಭ ಹಾರೈಸಿದರು.

ನಾಟ್ಯ ತರಬೇತಿ ಗುರುಗಳಾಗಿ ಧರ್ಮಸ್ಥಳ ಮೇಳದಲ್ಲಿ ಅನೇಕ ವರ್ಷಗಳ ಕಾಲ ಕಲಾವಿದನಾಗಿ ಸೇವೆಗೈದ ಈಶ್ವರ ಪ್ರಸಾದ್ ಸಹಕರಿಸಲಿದ್ದು ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಶಿಕ್ಷಣದೊಂದಿಗೆ ಕಲೆಯ ಆಸಕ್ತಿಯೂ ವಿದ್ಯಾರ್ಥಿಗಳಲ್ಲಿ ಬೆಳೆಯಲಿ ಎಂದು ಹಾರೈಸಿದರು.

ಮುಖ್ಯ ಶಿಕ್ಷಕರಾದ ಶ್ರೀಮತಿ ಶಾಂತ ಶೆಟ್ಟಿ ಉಪಸ್ಥಿತರಿದ್ದರು. ಶಿಕ್ಷಕರಾದ ಶರತ್ ತುಳುಪುಳೆ ಇವರು ಯಕ್ಷ ಶೈಲಿಯಲ್ಲಿ ಪ್ರಾರ್ಥಿಸಿ, ಶ್ರೀಮತಿ ಶೋಲಿ ಇವರು ಸ್ವಾಗತಿಸಿ, ಶ್ರೀಮತಿ ಸುಚಿತ್ರ ರವರು ವಂದಿಸಿದ ಈ ಕಾರ್ಯಕ್ರಮವನ್ನು ವಿನಾಯಕ ಜೋಶಿ ನಿರ್ವಹಿಸಿದರು.

Related posts

ಹರಿಯಾಣದಲ್ಲಿ ನಡೆಯುವ ಗೋಲ್ಡನ್ ಆರೋ ರ್‍ಯಾಲಿಗೆ ಬೆಳ್ತಂಗಡಿಯ ಸೇವಂತಿ, ದ್ವಿಶಾ ಆಯ್ಕೆ

Suddi Udaya

ಬೆಳ್ತಂಗಡಿ: ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಟಿ.ಡಿ ರಾಘವೇಂದ್ರರವರ ಮಾತೃಶ್ರೀ ನಾಗರತ್ನಮ್ಮ ನಿಧನ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಸಿಯೋನ್ ಆಶ್ರಮದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ನಾವೂರು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಉಜಿರೆ: ಮಿತ್ರ ಯುವಕ ಮಂಡಲ ಅರಳಿ ಹಾಗೂ ಮಿತ್ರ ಮಹಿಳಾ ಮಂಡಳಿ ವತಿಯಿಂದ 27ನೇ ವರ್ಷದ ಪ್ರತಿಭಾ ಸಂಗಮ

Suddi Udaya
error: Content is protected !!