ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ವಿದ್ಯಾರ್ಥಿಗಳಿಂದ ಗುರುವಾಯನಕೆರೆ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಸ. ಹಿ. ಪ್ರಾ. ಶಾಲೆ. ಗುರುವಾಯನಕೆರೆಯಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ನ ವಿದ್ಯಾರ್ಥಿಗಳಿಂದ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಶಾಲಾ ಆವರಣದಲ್ಲಿ ತೆಂಗಿನ ಸಸಿ, ನುಗ್ಗೆ ಗಿಡ, ಜೀಹಲಸು, ಹೂವಿನ ಗಿಡ, ಹಣ್ಣಿನ ಗಿಡಗಳು, ಅಲ್ಲದೇ ತರಕಾರಿ ಬೀಜ ಬಿತ್ತನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಹಾಜಿ ಅಬ್ದುಲ್ ಲತೀಫ್ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಉಮಾ. ಡಿ. ಗೌಡ ರವರು ವಿದ್ಯಾರ್ಥಿಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದರು. ಎಲ್ಲಾ ಶಿಕ್ಷಕ ವೃಂದ ದವರು ಉಪಸ್ಥಿತರಿದ್ದರು.

Leave a Comment

error: Content is protected !!