April 12, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

ಇಂದಬೆಟ್ಟು : ಭಜನಾ ಪರಿಷತ್ ಬೆಳ್ತಂಗಡಿ ತಾಲೂಕು ಇದರ ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆಯು ಇಂದಬೆಟ್ಟುವಿನ ಅರ್ಧನಾರೀಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಭಾಗವಹಿಸಿ ವಲಯ ಮಟ್ಟದ ಭಜನಾ ಮಂಡಳಿಗಳು ಸಂಘಟಿತರಾದರೆ ಮಾತ್ರ ತಾಲೂಕು ಭಜನಾ ಪರಿಷತ್ತನ್ನು ಬಲಯುತ ಗೊಳಿಸಬಹುದು ಆದುದರಿಂದ ನಮ್ಮ ನಮ್ಮೊಳಗಿನ ಸಣ್ಣ ಪುಟ್ಟ ಭಿನ್ನ ಅಭಿಪ್ರಾಯಗಳನ್ನು ಬದಿಗಿಟ್ಟು ಧಾರ್ಮಿಕತೆಯಲ್ಲಿ ನಾವೆಲ್ಲರೂ ಒಂದಾಗುವುದರೊಂದಿಗೆ ಮುಂದಿನ ಯುವ ಪೀಳಿಗೆಗಳಿಗೆ ಧಾರ್ಮಿಕತೆಯೊಂದಿಗೆ ಗುರುಹಿರಿಯರನ್ನು ಗೌರವಿಸುವ ಸಂಸ್ಕೃತಿಯನ್ನು ಕಲಿಸಬೇಕು ಎನ್ನುತ್ತಾ ಭಜನಾ ಮಂಡಳಿಗಳಲ್ಲಿರುವ ಕುಂದು ಕೊರತೆಗಳ ಬಗ್ಗೆ ಭಜನಾ ಮಂಡಳಿ ಅಧ್ಯಕ್ಷ ಕಾರ್ಯದರ್ಶಿಯಲ್ಲಿ ವಿಮರ್ಶೆ ನಡೆಸಿ ಸೂಕ್ತ ಮಾಹಿತಿ ಮಾರ್ಗದರ್ಶನವನ್ನು ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯದ ಮೇಲ್ವಿಚಾರಕಿಯಾದ ಶ್ರೀಮತಿ ಉಷಾ, ಭಜನಾ ಪರಿಷತ್ತಿನ ವಲಯ ಸಂಯೋಜಕಿಯಾದ ಶ್ರೀಮತಿ ಬೇಬಿ ಉಮೇಶ್, ಸೇವಾ ಪ್ರತಿನಿಧಿಗಳು, ಭಜನಾ ಮಂಡಳಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಲಯದ ಸೇವಾ ಪ್ರತಿನಿಧಿ ಶ್ರೀಮತಿ ಸುನಿತಾ ಸ್ವಾಗತಿಸಿದರು ಹಾಗೂ ಸೇವಾ ಪ್ರತಿನಿಧಿ ಸುಮತಿಯವರು ವಂದಿಸಿದರು.

Related posts

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಆತ್ಮಹತ್ಯೆಗೆ ಯತ್ನಿಸಿದ್ದ ಕೊಕ್ಕಡದ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya

ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾಗದರ್ಶನದಲ್ಲಿ ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಸ್ವಚ್ಛತಾ ಕಾರ್ಯ

Suddi Udaya

ಲಾಯಿಲ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಉಜಿರೆ: ಶ್ರೀ ದೇಶಿಕೇಂದ್ರ ಎಜುಕೇಶನ್ ಟ್ರಸ್ಟ್ ಇದರ ನೂತನ ಒಳ ಕ್ರೀಡಾಂಗಣ ಪ್ರಾರಂಭೋತ್ಸವ ಮಕ್ಕಳ ಭವಿಷ್ಯಕ್ಕೆ ಆಧುನಿಕ ಶಿಕ್ಷಣ ಅಗತ್ಯ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya
error: Content is protected !!