September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

ಇಂದಬೆಟ್ಟು : ಭಜನಾ ಪರಿಷತ್ ಬೆಳ್ತಂಗಡಿ ತಾಲೂಕು ಇದರ ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆಯು ಇಂದಬೆಟ್ಟುವಿನ ಅರ್ಧನಾರೀಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಭಾಗವಹಿಸಿ ವಲಯ ಮಟ್ಟದ ಭಜನಾ ಮಂಡಳಿಗಳು ಸಂಘಟಿತರಾದರೆ ಮಾತ್ರ ತಾಲೂಕು ಭಜನಾ ಪರಿಷತ್ತನ್ನು ಬಲಯುತ ಗೊಳಿಸಬಹುದು ಆದುದರಿಂದ ನಮ್ಮ ನಮ್ಮೊಳಗಿನ ಸಣ್ಣ ಪುಟ್ಟ ಭಿನ್ನ ಅಭಿಪ್ರಾಯಗಳನ್ನು ಬದಿಗಿಟ್ಟು ಧಾರ್ಮಿಕತೆಯಲ್ಲಿ ನಾವೆಲ್ಲರೂ ಒಂದಾಗುವುದರೊಂದಿಗೆ ಮುಂದಿನ ಯುವ ಪೀಳಿಗೆಗಳಿಗೆ ಧಾರ್ಮಿಕತೆಯೊಂದಿಗೆ ಗುರುಹಿರಿಯರನ್ನು ಗೌರವಿಸುವ ಸಂಸ್ಕೃತಿಯನ್ನು ಕಲಿಸಬೇಕು ಎನ್ನುತ್ತಾ ಭಜನಾ ಮಂಡಳಿಗಳಲ್ಲಿರುವ ಕುಂದು ಕೊರತೆಗಳ ಬಗ್ಗೆ ಭಜನಾ ಮಂಡಳಿ ಅಧ್ಯಕ್ಷ ಕಾರ್ಯದರ್ಶಿಯಲ್ಲಿ ವಿಮರ್ಶೆ ನಡೆಸಿ ಸೂಕ್ತ ಮಾಹಿತಿ ಮಾರ್ಗದರ್ಶನವನ್ನು ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯದ ಮೇಲ್ವಿಚಾರಕಿಯಾದ ಶ್ರೀಮತಿ ಉಷಾ, ಭಜನಾ ಪರಿಷತ್ತಿನ ವಲಯ ಸಂಯೋಜಕಿಯಾದ ಶ್ರೀಮತಿ ಬೇಬಿ ಉಮೇಶ್, ಸೇವಾ ಪ್ರತಿನಿಧಿಗಳು, ಭಜನಾ ಮಂಡಳಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಲಯದ ಸೇವಾ ಪ್ರತಿನಿಧಿ ಶ್ರೀಮತಿ ಸುನಿತಾ ಸ್ವಾಗತಿಸಿದರು ಹಾಗೂ ಸೇವಾ ಪ್ರತಿನಿಧಿ ಸುಮತಿಯವರು ವಂದಿಸಿದರು.

Related posts

ಇಳಂತಿಲ : ಸಂವಿಧಾನ ಜಾಗೃತಿ ಜಾಥಾ

Suddi Udaya

ವೇಣೂರು: ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಕಾರ್ಯಕ್ರಮ

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಶ್ರೀ ಹನುಮಾನ್ ರಥೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ಗುರುವಾಯನಕೆರೆ ಅದ್ಭುತ ಸಾಧನೆ

Suddi Udaya

ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya
error: Content is protected !!