24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ ಎಸ್.ಡಿ.ಯಂ.ಐ.ಟಿಯ ಡಾ.ಸುಬ್ರಹ್ಮಣ್ಯ ಭಟ್ಟರಿಗೆ ಪೇಜಾವರ ಶ್ರೀಗಳಿಂದ ಸನ್ಮಾನ

ಉಜಿರೆ: ತೆಂಕುತಿಟ್ಟು ಯಕ್ಷಗಾನದ ಖ್ಯಾತ ಕಲಾವಿದ ಶ್ರೀ ರಾಕೇಶ್ ರೈ ಅಡ್ಕರವರ ಯಕ್ಷಗಾನ ತರಬೇತಿ ಸಂಸ್ಥೆ ಸನಾತನ ಯಕ್ಷಾಲಯ ಮಂಗಳೂರು ( ರಿ.) ಇದರ ಹದಿನಾಲ್ಕನೇ ವಾರ್ಷಿಕೋತ್ಸವದ ಪ್ರಯುಕ್ತ ಮಂಗಳೂರಿನ ಕುಡುಪು ಅನಂತಪದ್ಮನಾಭ ದೇವಾಲಯದ ಆವರಣದಲ್ಲಿ ನಡೆದ ಯಕ್ಷಗಾನ ಪ್ರದರ್ಶನ “ಶ್ರೀಕೃಷ್ಣ ಲೀಲಾಮೃತಮ್” ನ ವೇದಿಕೆಯಲ್ಲಿ ಪ್ರಸಂಗ ಸಂಯೋಜಕರಾಗಿ ಸಹಕರಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ವಿಭಾಗದ ಸಹಪ್ರಾಧ್ಯಾಪಕರಾದ ಡಾ.ಸುಬ್ರಹ್ಮಣ್ಯ ಭಟ್, ವೇಣೂರು ಇವರನ್ನು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಗಣ್ಯರ ಸಮ್ಮುಖದಲ್ಲಿ ಜೂನ್‌ 24 ರಂದು ಸನ್ಮಾನಿಸಿದರು.

ಡಾ.ಸುಬ್ರಹ್ಮಣ್ಯ ಭಟ್ಟರು ಸಂಯೋಜಿಸಿದ ಈ ಪ್ರಸಂಗದಲ್ಲಿ ಒಟ್ಟು ಇನ್ನೂರ ಹದಿನೇಳು ವಿದ್ಯಾರ್ಥಿಗಳು ಪಾತ್ರವಹಿಸಿದ್ದು ಹದಿನೈದು ಗಂಟೆಗಳ ಕಾಲ ನಿರಂತರ ಪ್ರದರ್ಶನ ನೀಡಿ ಹೊಸ ದಾಖಲೆಯನ್ನು ಮಾಡಲಾಯಿತು. ಈ ಹಿಂದೆ ಇದೇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸಂಪೂರ್ಣ ಕುರುಕ್ಷೇತ್ರ, ದಶಾವತಾರ ಹಾಗೂ ಏತದ್ಧಿ ರಾಮಾಯಣಂ ಎಂಬ ಯಕ್ಷಗಾನ ಪ್ರಸಂಗಗಳನ್ನು ಡಾ.ಸುಬ್ರಹ್ಮಣ್ಯ ಭಟ್ಟರು ಸಂಯೋಜಿಸಿ ಕೊಟ್ಟಿದ್ದರು.

Related posts

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನೆರಿಯ: ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಕುಂಟಾಲಪಲ್ಕೆ ಶ್ರೀ ಸರಸ್ವತಿ ಭಜನಾ ಮಂಡಳಿಯ ಬೆಳ್ಳಿ ಹಬ್ಬ ಸಂಭ್ರಮ-ಭಜನಾ ಕಮ್ಮಟೋತ್ಸವ

Suddi Udaya

ಬಜಿರೆ ಪಿಎಂಶ್ರೀ ಸ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷರಾದ ಜಯಾನಂದ ಗೌಡ, ಉಪಾಧ್ಯಕ್ಷರಾದ ಗೌರಿ ರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಣಿ ಸಭೆ

Suddi Udaya
error: Content is protected !!