23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಧರ್ಮ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲು ಆಯ್ಕೆ

ಬೆಳ್ತಂಗಡಿ: ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ವಠಾರದಲ್ಲಿ ಜೂ.25 ರಂದು ನಡೆದ ಸಂಘ ಪರಿವಾರದ ಮಂಗಳೂರು ವಿಭಾಗ ಸಭೆಯಲ್ಲಿ ಧರ್ಮ ಜಾಗರಣದ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲುರವರು ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಸುರುಳಿಯ ನಿವಾಸಿಯಾದ ಪ್ರಸಾದ್ ಬಾಲ್ಯದಿಂದಲೇ ಸ್ವಯಂಸೇವಕರಾಗಿ ಕಾರ್ಯತತ್ಪರರಾದವರು . ರಾಷ್ಟ್ರೀಯ ವಿಚಾರಗಳಿಂದ ಪ್ರಭಾವಿತರಾಗಿ ಮನೆ, ಮಠ ಬಿಟ್ಟು 6 ವರ್ಷಗಳ ಕಾಲ ಸಂಘದ ಪೂರ್ಣ ಅವಧಿ ಪ್ರಚಾರಕರಾಗಿ ತಮ್ಮನ್ನು ತೊಡಗಿಸಿಕೊಂಡವರು. ತರುವಾಯ ಸಂಘದ ಬೇರೆ ಜವಾಬ್ದಾರಿಯನ್ನು ನಿರ್ವಹಿಸಿ ಸಮಾಜದ ತಳಮಟ್ಟದಲ್ಲಿ ಕೆಲಸ ಮಾಡಿದ ಅನುಭವವನ್ನು ಹೊಂದಿದ್ದಾರೆ. ಗೋರಕ್ಷಾ ವಿಭಾಗದಲ್ಲಿ ಮುಂಚೂಣಿಯಲ್ಲಿ ಕೆಲಸ ನಿರ್ವಹಿಸಿದ್ದು ಪ್ರಸ್ತುತ ಸಂಘ ಪರಿವಾರ ಧರ್ಮಜಾಗರಣದ ಮಹತ್ತರ ಜವಾಬ್ದಾರಿಯನ್ನು ನೀಡಿದೆ.

Related posts

ನಾಲ್ಕೂರು: ಯುವಶಕ್ತಿ ಫ್ರೆಂಡ್ ವತಿಯಿಂದ ಮೊಸರು ಕುಡಿಕೆ ಉತ್ಸವ, ಗಮನ ಸೆಳೆದ ರಂಗಿನ ಹೋಳಿ, ಬಣ್ಣದ ಓಕುಳಿ

Suddi Udaya

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ‌ ಸನ್ಮಾನ

Suddi Udaya

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲಾ ವಾರ್ಷಿಕೋತ್ಸವ “ಮನೋಲ್ಲಾಸ ಸಾಂಸ್ಕೃತಿಕ ಸಂಭ್ರಮ -2025”

Suddi Udaya

ಸವಣಾಲು: ಪಲ್ಗುಣಿ ಮಹಿಳಾ ಮಂಡಲದ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ವಾಸ್ತು ಬಲಿ ಹೋಮ, ದುರ್ಗಾನಮಸ್ಕಾರ ಪೂಜೆ

Suddi Udaya
error: Content is protected !!