ಧರ್ಮ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲು ಆಯ್ಕೆ

Suddi Udaya

ಬೆಳ್ತಂಗಡಿ: ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ವಠಾರದಲ್ಲಿ ಜೂ.25 ರಂದು ನಡೆದ ಸಂಘ ಪರಿವಾರದ ಮಂಗಳೂರು ವಿಭಾಗ ಸಭೆಯಲ್ಲಿ ಧರ್ಮ ಜಾಗರಣದ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲುರವರು ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಸುರುಳಿಯ ನಿವಾಸಿಯಾದ ಪ್ರಸಾದ್ ಬಾಲ್ಯದಿಂದಲೇ ಸ್ವಯಂಸೇವಕರಾಗಿ ಕಾರ್ಯತತ್ಪರರಾದವರು . ರಾಷ್ಟ್ರೀಯ ವಿಚಾರಗಳಿಂದ ಪ್ರಭಾವಿತರಾಗಿ ಮನೆ, ಮಠ ಬಿಟ್ಟು 6 ವರ್ಷಗಳ ಕಾಲ ಸಂಘದ ಪೂರ್ಣ ಅವಧಿ ಪ್ರಚಾರಕರಾಗಿ ತಮ್ಮನ್ನು ತೊಡಗಿಸಿಕೊಂಡವರು. ತರುವಾಯ ಸಂಘದ ಬೇರೆ ಜವಾಬ್ದಾರಿಯನ್ನು ನಿರ್ವಹಿಸಿ ಸಮಾಜದ ತಳಮಟ್ಟದಲ್ಲಿ ಕೆಲಸ ಮಾಡಿದ ಅನುಭವವನ್ನು ಹೊಂದಿದ್ದಾರೆ. ಗೋರಕ್ಷಾ ವಿಭಾಗದಲ್ಲಿ ಮುಂಚೂಣಿಯಲ್ಲಿ ಕೆಲಸ ನಿರ್ವಹಿಸಿದ್ದು ಪ್ರಸ್ತುತ ಸಂಘ ಪರಿವಾರ ಧರ್ಮಜಾಗರಣದ ಮಹತ್ತರ ಜವಾಬ್ದಾರಿಯನ್ನು ನೀಡಿದೆ.

Leave a Comment

error: Content is protected !!