25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಧರ್ಮ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲು ಆಯ್ಕೆ

ಬೆಳ್ತಂಗಡಿ: ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ವಠಾರದಲ್ಲಿ ಜೂ.25 ರಂದು ನಡೆದ ಸಂಘ ಪರಿವಾರದ ಮಂಗಳೂರು ವಿಭಾಗ ಸಭೆಯಲ್ಲಿ ಧರ್ಮ ಜಾಗರಣದ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲುರವರು ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಸುರುಳಿಯ ನಿವಾಸಿಯಾದ ಪ್ರಸಾದ್ ಬಾಲ್ಯದಿಂದಲೇ ಸ್ವಯಂಸೇವಕರಾಗಿ ಕಾರ್ಯತತ್ಪರರಾದವರು . ರಾಷ್ಟ್ರೀಯ ವಿಚಾರಗಳಿಂದ ಪ್ರಭಾವಿತರಾಗಿ ಮನೆ, ಮಠ ಬಿಟ್ಟು 6 ವರ್ಷಗಳ ಕಾಲ ಸಂಘದ ಪೂರ್ಣ ಅವಧಿ ಪ್ರಚಾರಕರಾಗಿ ತಮ್ಮನ್ನು ತೊಡಗಿಸಿಕೊಂಡವರು. ತರುವಾಯ ಸಂಘದ ಬೇರೆ ಜವಾಬ್ದಾರಿಯನ್ನು ನಿರ್ವಹಿಸಿ ಸಮಾಜದ ತಳಮಟ್ಟದಲ್ಲಿ ಕೆಲಸ ಮಾಡಿದ ಅನುಭವವನ್ನು ಹೊಂದಿದ್ದಾರೆ. ಗೋರಕ್ಷಾ ವಿಭಾಗದಲ್ಲಿ ಮುಂಚೂಣಿಯಲ್ಲಿ ಕೆಲಸ ನಿರ್ವಹಿಸಿದ್ದು ಪ್ರಸ್ತುತ ಸಂಘ ಪರಿವಾರ ಧರ್ಮಜಾಗರಣದ ಮಹತ್ತರ ಜವಾಬ್ದಾರಿಯನ್ನು ನೀಡಿದೆ.

Related posts

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಸನ ಮುಕ್ತ ಅಭಿಯಾನ ಕಾರ್ಯಕ್ರಮ

Suddi Udaya

ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಮಚ್ಚಿನ ಸಿ.ಎ. ಬ್ಯಾಂಕ್ ಚುನಾವಣೆ: ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು

Suddi Udaya

ಶಾಸಕ ಹರೀಶ್ ಪೂಂಜರಿಗೆ ಅಂಗರಕ್ಷಕ ನಿಯೋಜನೆ

Suddi Udaya

ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ

Suddi Udaya

ಡಿ.17: ಬೆಳ್ತಂಗಡಿ ತಾಲೂಕಿನ 18ನೇ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಪ್ರೊ.ಎ. ಕೃಷ್ಣಪ್ಪ ಪೂಜಾರಿ ಆಯ್ಕೆ

Suddi Udaya
error: Content is protected !!