30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಧರ್ಮ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲು ಆಯ್ಕೆ

ಬೆಳ್ತಂಗಡಿ: ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ವಠಾರದಲ್ಲಿ ಜೂ.25 ರಂದು ನಡೆದ ಸಂಘ ಪರಿವಾರದ ಮಂಗಳೂರು ವಿಭಾಗ ಸಭೆಯಲ್ಲಿ ಧರ್ಮ ಜಾಗರಣದ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲುರವರು ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಸುರುಳಿಯ ನಿವಾಸಿಯಾದ ಪ್ರಸಾದ್ ಬಾಲ್ಯದಿಂದಲೇ ಸ್ವಯಂಸೇವಕರಾಗಿ ಕಾರ್ಯತತ್ಪರರಾದವರು . ರಾಷ್ಟ್ರೀಯ ವಿಚಾರಗಳಿಂದ ಪ್ರಭಾವಿತರಾಗಿ ಮನೆ, ಮಠ ಬಿಟ್ಟು 6 ವರ್ಷಗಳ ಕಾಲ ಸಂಘದ ಪೂರ್ಣ ಅವಧಿ ಪ್ರಚಾರಕರಾಗಿ ತಮ್ಮನ್ನು ತೊಡಗಿಸಿಕೊಂಡವರು. ತರುವಾಯ ಸಂಘದ ಬೇರೆ ಜವಾಬ್ದಾರಿಯನ್ನು ನಿರ್ವಹಿಸಿ ಸಮಾಜದ ತಳಮಟ್ಟದಲ್ಲಿ ಕೆಲಸ ಮಾಡಿದ ಅನುಭವವನ್ನು ಹೊಂದಿದ್ದಾರೆ. ಗೋರಕ್ಷಾ ವಿಭಾಗದಲ್ಲಿ ಮುಂಚೂಣಿಯಲ್ಲಿ ಕೆಲಸ ನಿರ್ವಹಿಸಿದ್ದು ಪ್ರಸ್ತುತ ಸಂಘ ಪರಿವಾರ ಧರ್ಮಜಾಗರಣದ ಮಹತ್ತರ ಜವಾಬ್ದಾರಿಯನ್ನು ನೀಡಿದೆ.

Related posts

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಎಸ್ಸೆಸ್ಸೆಲ್ಸಿಯಲ್ಲಿ ಅತ್ಯುತ್ತಮ  ಫಲಿತಾಂಶ

Suddi Udaya

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya

ಮಚ್ಚಿನ: ಕಲ್ಲಗುಡ್ಡೆ ರಸ್ತೆಯಲ್ಲಿ ತುಂಬಿದ ನೀರು

Suddi Udaya

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆ ಶಕ್ತಿ ನಗರದ ಜಂಕ್ಷನ್ ನಲ್ಲಿ ನಾಮಫಲಕ ಅಳವಡಿಕೆ

Suddi Udaya

ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಕಬ್ & ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭ

Suddi Udaya
error: Content is protected !!