23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾಳ ದೇಗುಲದ ಗದ್ದೆಯಲ್ಲಿ ನೇಜಿ ನಾಟಿ

ನ್ಯಾಯತರ್ಪು ಗ್ರಾಮದ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಾಕಿ ಮಾರು ಗದ್ದೆಯಲ್ಲಿ ಸಂಪ್ರದಾಯದಂತೆ ಭತ್ತದ ನಾಟಿಯನ್ನು ನೆರವೇರಿಸಲಾಯಿತು.
ಇಲ್ಲಿ ಬೆಳೆದ ಭತ್ತದ ತೆನೆಗಳನ್ನು ಚೌತಿ ಸಂದರ್ಭ ದೇಗುಲಕ್ಕೆ ಸಮರ್ಪಿಸಿ ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಳಿಯ ಪ್ಯಾಕ್ಸ್ ಅಧ್ಯಕ್ಷ ವಸಂತ ಮಜಲು ಮಾತನಾಡಿ “ಗದ್ದೆಗಳನ್ನು ಹಡಿಲು ಬಿಡದೆ ಸಾಗುವಳಿ ಮಾಡಬೇಕು. ಇಂದು ಗದ್ದೆ ಬೇಸಾಯ ಬಹಳ ಕಡಿಮೆ ಸಂಖ್ಯೆಯಲ್ಲಿ ಕಂಡುಬರುತ್ತಿದ್ದು ಈ ಬಗ್ಗೆ ಯುವಜನತೆ ಹೆಚ್ಚಿನ ಉತ್ಸಾಹ ತೋರಬೇಕು. ನಾವು ತಿನ್ನುವ ಅನ್ನವನ್ನು ನಾವೇ ಬೆಳೆಯಬೇಕಾದ ಅಗತ್ಯವಿದೆ”ಎಂದು ಹೇಳಿದರು.


ದೇವಸ್ಥಾನದ ವ್ಯವಸ್ಥಾಪನ ಸಮಿತಿ ಪದಾಧಿಕಾರಿಗಳಾದ ದಿನೇಶ ಗೌಡ, ಅಂಬಾ ಬಿ.ಆಳ್ವ, ಉಮೇಶ್ ಕೇಳ್ತಡ್ಕ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ, ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಭಜನಾ ಮಂಡಳಿ ಅಧ್ಯಕ್ಷ ಉಮೇಶ್ ಶೆಟ್ಟಿ ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷೆ ರೀತಾ ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.

Related posts

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಯ್ಯೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆ ಮತ್ತು ಬೆಳ್ತಂಗಡಿ ತಾ.ಪಂ. ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಕೊಯ್ಯೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಯ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರ

Suddi Udaya

ದ. ಕ. ಗ್ಯಾರೇಜು ಮಾಲಕರ ಸಂಘ ಬೆಳ್ತಂಗಡಿ ವಲಯಕ್ಕೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!