24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

ಇಂದಬೆಟ್ಟು : ಭಜನಾ ಪರಿಷತ್ ಬೆಳ್ತಂಗಡಿ ತಾಲೂಕು ಇದರ ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆಯು ಇಂದಬೆಟ್ಟುವಿನ ಅರ್ಧನಾರೀಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಭಾಗವಹಿಸಿ ವಲಯ ಮಟ್ಟದ ಭಜನಾ ಮಂಡಳಿಗಳು ಸಂಘಟಿತರಾದರೆ ಮಾತ್ರ ತಾಲೂಕು ಭಜನಾ ಪರಿಷತ್ತನ್ನು ಬಲಯುತ ಗೊಳಿಸಬಹುದು ಆದುದರಿಂದ ನಮ್ಮ ನಮ್ಮೊಳಗಿನ ಸಣ್ಣ ಪುಟ್ಟ ಭಿನ್ನ ಅಭಿಪ್ರಾಯಗಳನ್ನು ಬದಿಗಿಟ್ಟು ಧಾರ್ಮಿಕತೆಯಲ್ಲಿ ನಾವೆಲ್ಲರೂ ಒಂದಾಗುವುದರೊಂದಿಗೆ ಮುಂದಿನ ಯುವ ಪೀಳಿಗೆಗಳಿಗೆ ಧಾರ್ಮಿಕತೆಯೊಂದಿಗೆ ಗುರುಹಿರಿಯರನ್ನು ಗೌರವಿಸುವ ಸಂಸ್ಕೃತಿಯನ್ನು ಕಲಿಸಬೇಕು ಎನ್ನುತ್ತಾ ಭಜನಾ ಮಂಡಳಿಗಳಲ್ಲಿರುವ ಕುಂದು ಕೊರತೆಗಳ ಬಗ್ಗೆ ಭಜನಾ ಮಂಡಳಿ ಅಧ್ಯಕ್ಷ ಕಾರ್ಯದರ್ಶಿಯಲ್ಲಿ ವಿಮರ್ಶೆ ನಡೆಸಿ ಸೂಕ್ತ ಮಾಹಿತಿ ಮಾರ್ಗದರ್ಶನವನ್ನು ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯದ ಮೇಲ್ವಿಚಾರಕಿಯಾದ ಶ್ರೀಮತಿ ಉಷಾ, ಭಜನಾ ಪರಿಷತ್ತಿನ ವಲಯ ಸಂಯೋಜಕಿಯಾದ ಶ್ರೀಮತಿ ಬೇಬಿ ಉಮೇಶ್, ಸೇವಾ ಪ್ರತಿನಿಧಿಗಳು, ಭಜನಾ ಮಂಡಳಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಲಯದ ಸೇವಾ ಪ್ರತಿನಿಧಿ ಶ್ರೀಮತಿ ಸುನಿತಾ ಸ್ವಾಗತಿಸಿದರು ಹಾಗೂ ಸೇವಾ ಪ್ರತಿನಿಧಿ ಸುಮತಿಯವರು ವಂದಿಸಿದರು.

Related posts

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಹಲ್ಲೆ ಪ್ರಕರಣ: ಆಸ್ಪತ್ರೆಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ: ಆರೋಗ್ಯ ವಿಚಾರಣೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ–2 ಫಲಿತಾಂಶ: ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಯಾನ ಪೊನ್ನಮ್ಮ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ ಆಡಳಿತ ಮಂಡಳಿಯವರಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಉಜಿರೆಯಲ್ಲಿ ದ್ವಿಚಕ್ರ ವಾಹನ ರ್‍ಯಾಲಿ :

Suddi Udaya

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

Suddi Udaya
error: Content is protected !!