22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

ಇಂದಬೆಟ್ಟು : ಭಜನಾ ಪರಿಷತ್ ಬೆಳ್ತಂಗಡಿ ತಾಲೂಕು ಇದರ ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆಯು ಇಂದಬೆಟ್ಟುವಿನ ಅರ್ಧನಾರೀಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಭಾಗವಹಿಸಿ ವಲಯ ಮಟ್ಟದ ಭಜನಾ ಮಂಡಳಿಗಳು ಸಂಘಟಿತರಾದರೆ ಮಾತ್ರ ತಾಲೂಕು ಭಜನಾ ಪರಿಷತ್ತನ್ನು ಬಲಯುತ ಗೊಳಿಸಬಹುದು ಆದುದರಿಂದ ನಮ್ಮ ನಮ್ಮೊಳಗಿನ ಸಣ್ಣ ಪುಟ್ಟ ಭಿನ್ನ ಅಭಿಪ್ರಾಯಗಳನ್ನು ಬದಿಗಿಟ್ಟು ಧಾರ್ಮಿಕತೆಯಲ್ಲಿ ನಾವೆಲ್ಲರೂ ಒಂದಾಗುವುದರೊಂದಿಗೆ ಮುಂದಿನ ಯುವ ಪೀಳಿಗೆಗಳಿಗೆ ಧಾರ್ಮಿಕತೆಯೊಂದಿಗೆ ಗುರುಹಿರಿಯರನ್ನು ಗೌರವಿಸುವ ಸಂಸ್ಕೃತಿಯನ್ನು ಕಲಿಸಬೇಕು ಎನ್ನುತ್ತಾ ಭಜನಾ ಮಂಡಳಿಗಳಲ್ಲಿರುವ ಕುಂದು ಕೊರತೆಗಳ ಬಗ್ಗೆ ಭಜನಾ ಮಂಡಳಿ ಅಧ್ಯಕ್ಷ ಕಾರ್ಯದರ್ಶಿಯಲ್ಲಿ ವಿಮರ್ಶೆ ನಡೆಸಿ ಸೂಕ್ತ ಮಾಹಿತಿ ಮಾರ್ಗದರ್ಶನವನ್ನು ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯದ ಮೇಲ್ವಿಚಾರಕಿಯಾದ ಶ್ರೀಮತಿ ಉಷಾ, ಭಜನಾ ಪರಿಷತ್ತಿನ ವಲಯ ಸಂಯೋಜಕಿಯಾದ ಶ್ರೀಮತಿ ಬೇಬಿ ಉಮೇಶ್, ಸೇವಾ ಪ್ರತಿನಿಧಿಗಳು, ಭಜನಾ ಮಂಡಳಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಲಯದ ಸೇವಾ ಪ್ರತಿನಿಧಿ ಶ್ರೀಮತಿ ಸುನಿತಾ ಸ್ವಾಗತಿಸಿದರು ಹಾಗೂ ಸೇವಾ ಪ್ರತಿನಿಧಿ ಸುಮತಿಯವರು ವಂದಿಸಿದರು.

Related posts

ಮಾಲಾಡಿ: ಜ್ವರದಿಂದ ಬಳಲಿ ಯುವಕ ಮೃತ್ಯು

Suddi Udaya

ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Suddi Udaya

ಗೇರುಕಟ್ಟೆ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಕೆಸರುಗದ್ದೆ ಕ್ರೀಡಾಕೂಟ: ಅಧ್ಯಕ್ಷರಾಗಿ ನವೀನ್ ಗೌಡ ಆಯ್ಕೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ವಾಲಿಬಾಲ್ ಪಂದ್ಯಾಟ: ಪದ್ಮುಂಜ ಸರಕಾರಿ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!