25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

ಇಂದಬೆಟ್ಟು : ಭಜನಾ ಪರಿಷತ್ ಬೆಳ್ತಂಗಡಿ ತಾಲೂಕು ಇದರ ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆಯು ಇಂದಬೆಟ್ಟುವಿನ ಅರ್ಧನಾರೀಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಭಾಗವಹಿಸಿ ವಲಯ ಮಟ್ಟದ ಭಜನಾ ಮಂಡಳಿಗಳು ಸಂಘಟಿತರಾದರೆ ಮಾತ್ರ ತಾಲೂಕು ಭಜನಾ ಪರಿಷತ್ತನ್ನು ಬಲಯುತ ಗೊಳಿಸಬಹುದು ಆದುದರಿಂದ ನಮ್ಮ ನಮ್ಮೊಳಗಿನ ಸಣ್ಣ ಪುಟ್ಟ ಭಿನ್ನ ಅಭಿಪ್ರಾಯಗಳನ್ನು ಬದಿಗಿಟ್ಟು ಧಾರ್ಮಿಕತೆಯಲ್ಲಿ ನಾವೆಲ್ಲರೂ ಒಂದಾಗುವುದರೊಂದಿಗೆ ಮುಂದಿನ ಯುವ ಪೀಳಿಗೆಗಳಿಗೆ ಧಾರ್ಮಿಕತೆಯೊಂದಿಗೆ ಗುರುಹಿರಿಯರನ್ನು ಗೌರವಿಸುವ ಸಂಸ್ಕೃತಿಯನ್ನು ಕಲಿಸಬೇಕು ಎನ್ನುತ್ತಾ ಭಜನಾ ಮಂಡಳಿಗಳಲ್ಲಿರುವ ಕುಂದು ಕೊರತೆಗಳ ಬಗ್ಗೆ ಭಜನಾ ಮಂಡಳಿ ಅಧ್ಯಕ್ಷ ಕಾರ್ಯದರ್ಶಿಯಲ್ಲಿ ವಿಮರ್ಶೆ ನಡೆಸಿ ಸೂಕ್ತ ಮಾಹಿತಿ ಮಾರ್ಗದರ್ಶನವನ್ನು ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯದ ಮೇಲ್ವಿಚಾರಕಿಯಾದ ಶ್ರೀಮತಿ ಉಷಾ, ಭಜನಾ ಪರಿಷತ್ತಿನ ವಲಯ ಸಂಯೋಜಕಿಯಾದ ಶ್ರೀಮತಿ ಬೇಬಿ ಉಮೇಶ್, ಸೇವಾ ಪ್ರತಿನಿಧಿಗಳು, ಭಜನಾ ಮಂಡಳಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಲಯದ ಸೇವಾ ಪ್ರತಿನಿಧಿ ಶ್ರೀಮತಿ ಸುನಿತಾ ಸ್ವಾಗತಿಸಿದರು ಹಾಗೂ ಸೇವಾ ಪ್ರತಿನಿಧಿ ಸುಮತಿಯವರು ವಂದಿಸಿದರು.

Related posts

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ ರೂ. 20 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ತಾಲೂಕು ಮಟ್ಟದ ಶಟಲ್ ಪಂದ್ಯಾಟ: ಅನುಗ್ರಹ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕುವೆಟ್ಟು :ಶ್ರೀ ಗುರುನಾರಾಯಣ‌ ಸ್ವಾಮಿ ಸೇವಾ‌ ಸಂಘ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಕುವೆಟ್ಟು ಗ್ರಾಮ ಸಮಿತಿಯಿಂದ  ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಉಜಿರೆ ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಪ್ರಥಮ ಚಿಕಿತ್ಸೆ ತರಬೇತಿ

Suddi Udaya

ಉರುವಾಲು : ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2.50 ಲಕ್ಷ ಡಿ ಡಿ ಹಸ್ತಾಂತರ

Suddi Udaya

ಫೆ.3-7: ಶ್ರೀ ಕ್ಷೇತ್ರ ಓಡೀಲು ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!