30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ ಎಸ್.ಡಿ.ಯಂ.ಐ.ಟಿಯ ಡಾ.ಸುಬ್ರಹ್ಮಣ್ಯ ಭಟ್ಟರಿಗೆ ಪೇಜಾವರ ಶ್ರೀಗಳಿಂದ ಸನ್ಮಾನ

ಉಜಿರೆ: ತೆಂಕುತಿಟ್ಟು ಯಕ್ಷಗಾನದ ಖ್ಯಾತ ಕಲಾವಿದ ಶ್ರೀ ರಾಕೇಶ್ ರೈ ಅಡ್ಕರವರ ಯಕ್ಷಗಾನ ತರಬೇತಿ ಸಂಸ್ಥೆ ಸನಾತನ ಯಕ್ಷಾಲಯ ಮಂಗಳೂರು ( ರಿ.) ಇದರ ಹದಿನಾಲ್ಕನೇ ವಾರ್ಷಿಕೋತ್ಸವದ ಪ್ರಯುಕ್ತ ಮಂಗಳೂರಿನ ಕುಡುಪು ಅನಂತಪದ್ಮನಾಭ ದೇವಾಲಯದ ಆವರಣದಲ್ಲಿ ನಡೆದ ಯಕ್ಷಗಾನ ಪ್ರದರ್ಶನ “ಶ್ರೀಕೃಷ್ಣ ಲೀಲಾಮೃತಮ್” ನ ವೇದಿಕೆಯಲ್ಲಿ ಪ್ರಸಂಗ ಸಂಯೋಜಕರಾಗಿ ಸಹಕರಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ವಿಭಾಗದ ಸಹಪ್ರಾಧ್ಯಾಪಕರಾದ ಡಾ.ಸುಬ್ರಹ್ಮಣ್ಯ ಭಟ್, ವೇಣೂರು ಇವರನ್ನು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಗಣ್ಯರ ಸಮ್ಮುಖದಲ್ಲಿ ಜೂನ್‌ 24 ರಂದು ಸನ್ಮಾನಿಸಿದರು.

ಡಾ.ಸುಬ್ರಹ್ಮಣ್ಯ ಭಟ್ಟರು ಸಂಯೋಜಿಸಿದ ಈ ಪ್ರಸಂಗದಲ್ಲಿ ಒಟ್ಟು ಇನ್ನೂರ ಹದಿನೇಳು ವಿದ್ಯಾರ್ಥಿಗಳು ಪಾತ್ರವಹಿಸಿದ್ದು ಹದಿನೈದು ಗಂಟೆಗಳ ಕಾಲ ನಿರಂತರ ಪ್ರದರ್ಶನ ನೀಡಿ ಹೊಸ ದಾಖಲೆಯನ್ನು ಮಾಡಲಾಯಿತು. ಈ ಹಿಂದೆ ಇದೇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸಂಪೂರ್ಣ ಕುರುಕ್ಷೇತ್ರ, ದಶಾವತಾರ ಹಾಗೂ ಏತದ್ಧಿ ರಾಮಾಯಣಂ ಎಂಬ ಯಕ್ಷಗಾನ ಪ್ರಸಂಗಗಳನ್ನು ಡಾ.ಸುಬ್ರಹ್ಮಣ್ಯ ಭಟ್ಟರು ಸಂಯೋಜಿಸಿ ಕೊಟ್ಟಿದ್ದರು.

Related posts

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

Suddi Udaya

ಮಾವಿನಕಟ್ಟೆ: ಸ್ವಾತಿ ಎಂ. ಶೆಟ್ಟಿರವರಿಗೆ ಬೆಸ್ಟ್ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ ಪ್ರಶಸ್ತಿ

Suddi Udaya

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಪಾತ್ರೆ ಕೊಡುಗೆ

Suddi Udaya

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

Suddi Udaya

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!