22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ ಎಸ್.ಡಿ.ಯಂ.ಐ.ಟಿಯ ಡಾ.ಸುಬ್ರಹ್ಮಣ್ಯ ಭಟ್ಟರಿಗೆ ಪೇಜಾವರ ಶ್ರೀಗಳಿಂದ ಸನ್ಮಾನ

ಉಜಿರೆ: ತೆಂಕುತಿಟ್ಟು ಯಕ್ಷಗಾನದ ಖ್ಯಾತ ಕಲಾವಿದ ಶ್ರೀ ರಾಕೇಶ್ ರೈ ಅಡ್ಕರವರ ಯಕ್ಷಗಾನ ತರಬೇತಿ ಸಂಸ್ಥೆ ಸನಾತನ ಯಕ್ಷಾಲಯ ಮಂಗಳೂರು ( ರಿ.) ಇದರ ಹದಿನಾಲ್ಕನೇ ವಾರ್ಷಿಕೋತ್ಸವದ ಪ್ರಯುಕ್ತ ಮಂಗಳೂರಿನ ಕುಡುಪು ಅನಂತಪದ್ಮನಾಭ ದೇವಾಲಯದ ಆವರಣದಲ್ಲಿ ನಡೆದ ಯಕ್ಷಗಾನ ಪ್ರದರ್ಶನ “ಶ್ರೀಕೃಷ್ಣ ಲೀಲಾಮೃತಮ್” ನ ವೇದಿಕೆಯಲ್ಲಿ ಪ್ರಸಂಗ ಸಂಯೋಜಕರಾಗಿ ಸಹಕರಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ವಿಭಾಗದ ಸಹಪ್ರಾಧ್ಯಾಪಕರಾದ ಡಾ.ಸುಬ್ರಹ್ಮಣ್ಯ ಭಟ್, ವೇಣೂರು ಇವರನ್ನು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಗಣ್ಯರ ಸಮ್ಮುಖದಲ್ಲಿ ಜೂನ್‌ 24 ರಂದು ಸನ್ಮಾನಿಸಿದರು.

ಡಾ.ಸುಬ್ರಹ್ಮಣ್ಯ ಭಟ್ಟರು ಸಂಯೋಜಿಸಿದ ಈ ಪ್ರಸಂಗದಲ್ಲಿ ಒಟ್ಟು ಇನ್ನೂರ ಹದಿನೇಳು ವಿದ್ಯಾರ್ಥಿಗಳು ಪಾತ್ರವಹಿಸಿದ್ದು ಹದಿನೈದು ಗಂಟೆಗಳ ಕಾಲ ನಿರಂತರ ಪ್ರದರ್ಶನ ನೀಡಿ ಹೊಸ ದಾಖಲೆಯನ್ನು ಮಾಡಲಾಯಿತು. ಈ ಹಿಂದೆ ಇದೇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸಂಪೂರ್ಣ ಕುರುಕ್ಷೇತ್ರ, ದಶಾವತಾರ ಹಾಗೂ ಏತದ್ಧಿ ರಾಮಾಯಣಂ ಎಂಬ ಯಕ್ಷಗಾನ ಪ್ರಸಂಗಗಳನ್ನು ಡಾ.ಸುಬ್ರಹ್ಮಣ್ಯ ಭಟ್ಟರು ಸಂಯೋಜಿಸಿ ಕೊಟ್ಟಿದ್ದರು.

Related posts

ಕಲ್ಮಂಜ: ಬೈಕ್ ಹಾಗೂ ಕಾರು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಜ್ವಲ್ ಗೆ ನೀಟ್ ನಲ್ಲಿ 720ರಲ್ಲಿ 710

Suddi Udaya

ಅಕ್ರಮವಾಗಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಅಂಝದ್‌ನನ್ನು ಬಂಧಿಸಿದ ಪುತ್ತೂರು ಪೊಲೀಸರು

Suddi Udaya

ಕರ್ನಾಟಕ ರಾಜ್ಯ ಪ್ಯಾರಾಮೆಡಿಕಲ್ ಬೋರ್ಡ್ ರ್‍ಯಾಂಕ್ ಪ್ರಕಟ: ಗೇರುಕಟ್ಟೆ ಮನ್ ಶರ್ ಪ್ಯಾರಾಮೆಡಿಕಲ್ ಕಾಲೇಜಿಗೆ DMIT ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಒಟ್ಟು 6 ರ್‍ಯಾಂಕ್

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಜ್ಯೋತಿ ಆಸ್ಪತ್ರೆ ಆಶ್ರಯದಲ್ಲಿ ಜೀವ ರಕ್ಷಕದ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!